ಕೇಂದ್ರ ಸಚಿವ ಅನಂತ ಕುಮಾರ್ ಅವರ ನಿಧನಕ್ಕೆ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವ್ರು ಕಂಬನಿ ಮಿಡಿದಿದ್ದಾರೆ. ಮನಸ್ಸು ಮತ್ತು ಹೃದಯ ಭಾರವಾಗಿದೆ. ಸ್ನೇಹಿತ, ಸಹೋದರ ಅನಂತ ಕುಮಾರ್ ಇನ್ನಿಲ್ಲ ಅನ್ನೋ ಸುದ್ದಿಯಿಂದ ಆಘಾತಕ್ಕೆ ಒಳಗಾಗಿದ್ದೇನೆ ಅಂತ ಡಿವಿಎಸ್ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ.
ಅನಂತ ಕುಮಾರ್ ಬಹುಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಪಲ್ಯಕ್ಕೆ ತುತ್ತಾಗಿದ್ದ ಅವರು ಬೆಂಗಳೂರಿನ ಚಾಮರಾಜಪೇಟೆಯ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಅನಂತ ಕುಮಾರ್ ಅವರ ನಿಧನದಿಂದ ಇಡೀ ದೇಶ, ರಾಜ್ಯವೇ ದುಃಖದಲ್ಲಿ ಮುಳುಗಿದೆ. ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಪಕ್ಷ ಬೇಧ ಮರೆತು ಸಂತಾಪ ಸೂಚಿಸುತ್ತಿದ್ದಾರೆ. ರಾಜಕಾರಣದಿಂದ ಹೊರತಾಗಿ ಎಲ್ಲರೊಡನೆ ಉತ್ತಮ ಬಾಂದವ್ಯವನ್ನು ಅನಂತ ಕುಮಾರವರು ಇಟ್ಟುಕೊಂಡಿದ್ದರು.
ರಾಜ್ಯದಲ್ಲಿ ಬಿಜೆಪಿ ಕಟ್ಟಲು ಅನಂತ ಕುಮಾರ್ ಕೊಡುಗೆ ಅಪಾರ : ಬಿಎಸ್ ವೈ
ಅನಂತ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಪ್ರಧಾನಿ
ಯಾವ್ದೇ ಸರ್ಕಾರವಿದ್ದರೂ ರಾಜ್ಯವನ್ನು ಸಮರ್ಥಿಸಿಕೊಳ್ತಿದ್ರು ಅನಂತ್ ಕುಮಾರ್