Monday, September 25, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeರಾಜ್ಯವಿದ್ಯಾರ್ಥಿನಿಯ ಪತ್ರಕ್ಕೆ ಸಿಎಂ ಸ್ಪಂದನೆ -ಸಿಎಂ ಪತ್ರಕ್ಕೆ ಅಧಿಕಾರಿಗಳು ಡೋಂಟ್ ಕೇರ್..!

ವಿದ್ಯಾರ್ಥಿನಿಯ ಪತ್ರಕ್ಕೆ ಸಿಎಂ ಸ್ಪಂದನೆ -ಸಿಎಂ ಪತ್ರಕ್ಕೆ ಅಧಿಕಾರಿಗಳು ಡೋಂಟ್ ಕೇರ್..!

ತುಮಕೂರು : ವಿದ್ಯಾರ್ಥಿನಿಯ ಪತ್ರಕ್ಕೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಆದ್ರೆ, ದೇವರು ಕೊಟ್ರೂ ಪೂಜಾರಿ ಕೊಡ್ಲಿಲ್ಲ ಅಂದಹಾಗೆ ಮುಖ್ಯಮಂತ್ರಿಗಳ ಪತ್ರಕ್ಕೆ ಅಧಿಕಾರಿಗಳೇ ಡೋಂಟ್ ಕೇರ್ ಅಂತಿದ್ದಾರೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದು, ಈ ಕೊರತೆ ನೀಗಿಸಲು ಪುಷ್ಪಾ ಅನ್ನೋ ವಿದ್ಯಾರ್ಥಿನಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾಳೆ. ವಿದ್ಯಾರ್ಥಿನಿ ಪುಷ್ಪಾಳ ಪತ್ರಕ್ಕೆ ಸ್ಪಂದಿಸಿ, ಶೀಘ್ರದಲ್ಲೇ ಶಿಕ್ಷಕರನ್ನು ನೇಮಕ ಮಾಡ್ತೀವಿ ಅಂತ ಪತ್ರ ಮುಖೇನ ತಿಳಿಸಿದ್ದಾರೆ. ಶಿಕ್ಷಣ ಇಲಾಖೆ ಗಮನಕ್ಕೆ ಈ ವಿಚಾರವನ್ನು ತರುವುದಾಗಿಯೂ ಹೇಳಲಾಗಿದೆ. ಆದರೆ, ಅಧಿಕಾರಿಗಳು ಮಾತ್ರ ಸಿಎಂ ಪತ್ರಕ್ಕೆ ಕ್ಯಾರೇ ಅನ್ನುತ್ತಿಲ್ಲ. ಸಿಎಂ ಸೂಚನೆ ನೀಡಿದರೂ ಅಧಿಕಾರಿಗಳು ಬೇಜವಬ್ದಾರಿತನ ಮುಂದುವರೆಸಿದ್ದಾರೆ.
ಇನ್ನು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಕ್ಷೇತ್ರ ಕೊರಟಗೆರೆಯೇ ಅನ್ನೋದನ್ನು ಕೂಡ ಇಲ್ಲಿ ಗಮನಿಸಬೇಕಾಗುತ್ತೆ.

LEAVE A REPLY

Please enter your comment!
Please enter your name here

Most Popular

Recent Comments