Saturday, December 9, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeರಾಜ್ಯಸಾವಿನ ಸಂಖ್ಯೆ 25ಕ್ಕೆ ಏರಿಕೆ, ನಾಲ್ವರು ಪ್ರಾಣಾಪಾಯದಿಂದ ಪಾರು

ಸಾವಿನ ಸಂಖ್ಯೆ 25ಕ್ಕೆ ಏರಿಕೆ, ನಾಲ್ವರು ಪ್ರಾಣಾಪಾಯದಿಂದ ಪಾರು

ಮಂಡ್ಯ : ಮಂಡ್ಯದಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿದೆ. ದುರಂತದಲ್ಲಿ ಶಶಿ, ಗಿರೀಶ್, ಬಾಲಕ ರೋಹಿತ್​ ಸೇರಿ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪಾಂಡವಪುರದಿಂದ ಮಂಡ್ಯಕ್ಕೆ ತೆರಳುತ್ತಿದ್ದ ಬಸ್ ಚಾಲಕನ ನಿರ್ಲಕ್ಷ್ಯದಿಂದ ನಾಲೆಗೆ ಉರುಳಿದ್ದು, ಆರಂಭದಲ್ಲಿ 20ಜನ ಮೃತಪಟ್ಟಿರುವುದು ಧೃಡಪಡಿಸಲಾಗಿತ್ತು. ನಂತರ ನಡೆದ ಕಾರ್ಯಾಚರಣೆ ವೇಳೆ ನಾಲೆಯಲ್ಲಿ ತೇಲಿಹೋಗಿದ್ದ ಮೂವರ ಮೃತದೇಹವನ್ನು ಹೊರತೆಗೆಯಲಾಗಿದೆ. ಕ್ರೇನ್​ ಮೂಲಕ ನಾಲೆಯಲ್ಲಿ ಮುಳುಗಿದ್ದ ಬಸ್​ನ್ನು ಮೇಲಕ್ಕೆತ್ತಲಾಗಿದೆ. ಒಟ್ಟಾರೆ ಸಾವಿನ ಸಂಖ್ಯೆ 25 ಕ್ಕೆ ಏರಿದೆ.
ಘಟನೆಯ ಕುರಿತು ಟ್ವೀಟ್ ಮಾಡಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ವಿಷಾದ ವ್ಯಕ್ತಪಡಿಸಿದ್ದಾರೆ. “ಪಾಂಡವಪುರದ ಕನಗನಮರಡಿಯ ಘೋರ ಘಟನೆ ಮನಕಲುಕಿದೆ. ಅದರಲ್ಲೂ, ಬಾಳಿ ಬದುಕಬೇಕಿದ್ದ ಮಕ್ಕಳೂ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದು ನನ್ನನ್ನು ಅತೀವ ಘಾಸಿಗೊಳಿಸಿದೆ. ಇದು ಕ್ರೂರ ವಿಧಿಯ ಅಟ್ಟಹಾಸವೇ ಸರಿ. ನೋವುಣ್ಣುತ್ತಿರುವ ಸಂತ್ರಸ್ತ ಕುಟುಂಬಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ” ಅಂತ ಮಾಜಿ ಪ್ರಧಾನಿ ಟ್ವೀಟ್​ ಮಾಡಿದ್ದಾರೆ. ಸಿಎಂ ಎಚ್​ ಡಿ ಕುಮಾರಸ್ವಾಮಿ ಈಗಾಗಲೇ ಮಂಡ್ಯ ಜಿಲ್ಲೆಯ ಗಡಿ ಪ್ರವೇಶಿಸಿದ್ದಾರೆ. ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ, ಖಾಸಗಿ ಹೋಟೆಲ್​ನಲ್ಲಿ ನಡೆಯಬೇಕಿದ್ದ ಸಭೆ ಸೇರಿ ಇಂದು ನಡೆಯಬೇಕಿದ್ದ ಸಿಎಂ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ಕರಾಳ ಶನಿವಾರ : ಡ್ರೈವರ್​ ನಿರ್ಲಕ್ಷ್ಯಕ್ಕೆ 20 ಮಂದಿ ದುರ್ಮರಣ

ಮಂಡ್ಯ ದುರಂತಕ್ಕೆ ಮೋದಿ, ರಾಹುಲ್ ಸಂತಾಪ

 

LEAVE A REPLY

Please enter your comment!
Please enter your name here

Most Popular

Recent Comments