Friday, April 19, 2024

ಮಂಡ್ಯ ದುರಂತಕ್ಕೆ ಮೋದಿ, ರಾಹುಲ್ ಸಂತಾಪ

ಮಂಡ್ಯದ ಪಾಂಡವಪುರದ ಬಳಿ ಸಂಭವಿಸಿದ ಬಸ್ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. “ಕರ್ನಾಟಕದ ಮಂಡ್ಯದಲ್ಲಿ ನಡೆದ ಅಪಘಾತದ ಸುದ್ದಿ ಕೇಳಿ ಬಹಳ ನೋವಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿರುವ ಜನರ ಕುಟುಂಬಗಳ ಜೊತೆಯಲ್ಲಿ ನಾವಿದ್ದೇವೆ. ಮೃತರ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿ ನೀಡೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಅಂತ ಪ್ರಧಾನ ಮಂತ್ರಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. 

“ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ. ಮೃತರ ಕುಟುಂಬಕ್ಕೆ ದುಃಖವನ್ನು ತಡೆದುಕೊಳ್ಳೋ ಶಕ್ತಿ ದೇವರು ಕರುಣಿಸಲಿ’ ಅಂತ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.‌

ಕರಾಳ ಶನಿವಾರ : ಡ್ರೈವರ್​ ನಿರ್ಲಕ್ಷ್ಯಕ್ಕೆ 20 ಮಂದಿ ದುರ್ಮರಣ

ಸಾವಿನ ಸಂಖ್ಯೆ 25ಕ್ಕೆ ಏರಿಕೆ, ನಾಲ್ವರು ಪ್ರಾಣಾಪಾಯದಿಂದ ಪಾರು

RELATED ARTICLES

Related Articles

TRENDING ARTICLES