ಬೆಂಗಳೂರು : ಅಂತೂ ಇಂತೂ ಮೈತ್ರಿ ಸರ್ಕಾರ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, 8 ಮಂದಿ ನೂತನ ಸಚಿವರು ಇಂದು ಪ್ರಮಾಣವಚನ ಸ್ವೀಕರಿಸಿದ್ರು. ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪುರ, ಸತೀಶ್ ಜಾರಕಿಹೊಳಿ, ಸಿ.ಎಸ್.ಶಿವಳ್ಳಿ, ಪಿ.ಟಿ.ಪರಮೇಶ್ವರ್ ನಾಯ್ಕ್, ಇ.ತುಕಾರಾಂ,ರಹೀಂ ಖಾನ್, ಎಂಟಿಬಿ ನಾಗರಾಜ್ ಅವರು ಸಂಪುಟ ಸೇರಿದ ನೂತನ ಸಚಿವರು.
ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪುರ, ಇ.ತುಕಾರಾಂ ದೇವರ ಹೆಸರಲ್ಲಿ, ಸತೀಶ್ ಜಾರಕಿಹೊಳಿ ಬುದ್ಧ, ಬಸವ, ಅಂಬೇಡ್ಕರ್ ಹೆಸರಲ್ಲಿ, ಸಿ.ಎಸ್.ಶಿವಳ್ಳಿ ಈಶ್ವರನ ಹೆಸರಲ್ಲಿ, ಪಿ.ಟಿ.ಪರಮೇಶ್ವರ್ ನಾಯ್ಕ್ ತುಳಜಾಭವಾನಿ ಹೆಸರಲ್ಲಿ, ಎಂಟಿಬಿ ನಾಗರಾಜ್, ಮಂಜುನಾಥ ಸ್ವಾಮಿ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ರು. ರಹೀಂ ಖಾನ್ ಅಲ್ಲಾ ಹೆಸರಲ್ಲಿ ಇಂಗ್ಲಿಷ್ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ರು.
ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರು ; ಇಂಗ್ಲಿಷ್ ನಲ್ಲಿ ಪ್ರಮಾಣವಚನ ಸ್ವೀಕರಿಸಿದ್ರು ರಹೀಂ ಖಾನ್!
TRENDING ARTICLES