ರಾಮನಗರ : ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ, ಅಸಮಾಧಾನ ಕೈ ಕೈ ಮಿಲಾಯಿಸುವ ಮಟ್ಟಕ್ಕೆ ಬಂದಿದೆ.
ಈಗಲ್ಟನ್ ರೆಸಾರ್ಟ್ನಲ್ಲಿ ವಿಜಯ ನಗರ ಶಾಸಕ ಆನಂದ್ ಸಿಂಗ್ ಮತ್ತು ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಕೈ ಕೈ ಮಿಲಾಯಿಸಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ಅಲ್ಲಗಳೆದಿರೋ ಕಾಂಗ್ರೆಸ್ ಶಾಸಕರ ನಡುವೆ ಮಾರಾಮಾರಿ ಏನೂ ನಡೆದಿಲ್ಲ ಅಂತ ಹೇಳುತ್ತಿದೆ.
ಆದರೆ, ಗಣೇಶ್ ಮತ್ತು ಆನಂದ್ ಸಿಂಗ್ ಅವರ ನಡುವೆ ಮನಸ್ತಾಪ ಇಂದು-ನಿನ್ನೆಯದಲ್ಲ. ಇಬ್ಬರ ನಡುವೆ ಈ ಹಿಂದೆಯೂ ಸಾಕಷ್ಟು ಬಾರಿ ವಾಗ್ವಾದ ನಡೆದಿದೆ. ವಿಧಾನಸೌಧದಲ್ಲಿ ನಡೆದ ಸಭೆಯಲ್ಲೂ ಈ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು.
ನಿನ್ನೆ ಈಗಲ್ ಟನ್ ರೆಸಾರ್ಟ್ನಲ್ಲಿ ಪಾರ್ಟಿವೇಳೆ ಅಸಮಾಧಾನ ಸ್ಫೋಟಗೊಂಡಿದ್ದು, ಗಣೇಶ್ ಆನಂದ್ ಸಿಂಗ್ ಅವರಿಗೆ ಬಾಟಲಿಯಲ್ಲಿ ಹೊಡೆದಿದ್ದಾರೆ. ಗಣೇಶ್ ಬಿಜೆಪಿ ಸೇರೋ ಕುರಿತು ಕಾಂಗ್ರೆಸ್ ನಾಯಕರಿಗೆ ಆನಂದ್ ಸಿಂಗ್ ಮಾಹಿತಿ ನೀಡಿದ್ದು ಇಬ್ಬರ ನಡುವಿನ ಜಗಳಕ್ಕೆ ಪ್ರಮುಖ ಕಾರಣ ಅಂತ ಹೇಳಲಾಗಿದೆ.
ಸದ್ಯ ಆನಂದ್ ಸಿಂಗ್ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಡೆದಾಟದ ಬಗ್ಗೆ ಪ್ರತಿಕ್ರಿಯೆ ನೀಡಿರೋ ಸಚಿವ ಡಿ.ಕೆ ಶಿವಕುಮಾರ್, ‘ ಇಬ್ಬರು ಶಾಸಕರ ನಡುವೆ ಹೊಡೆದಾಟವೇನೂ ಆಗಿಲ್ಲ. ನಡೆದಿದ್ದು ಮಾತಿನ ಚಕಮಕಿಯಷ್ಟೇ. ಇಬ್ಬರ ನಡುವೆ ಸಂಧಾನ ನಡೆಸಿದ್ದೇನೆ” ಅಂತ ಹೇಳಿದ್ದಾರೆ. ಆದರೆ, ಮಾತಿನಚಕಿ ಮಾತ್ರ ಆಗಿದ್ದರೆ ಆನಂದ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದೇಕೆ?