Wednesday, September 27, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeರಾಜಕೀಯಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಅತೃಪ್ತರ ಯತ್ನ

ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಅತೃಪ್ತರ ಯತ್ನ

ಯಾವುದೇ ಕಾರಣಕ್ಕೂ ಪಕ್ಷ ತೊರೆಯಲ್ಲ ಅಂತ ಗೋಕಾಕ್​ ಶಾಸಕ ರಮೇಶ್​ ಜಾರಕಿಹೊಳಿ ಹೇಳಿದ್ದಾರೆ. ಈ ಮೂಲಕ ರಮೇಶ್ ಜಾರಕಿಹೊಳಿ ಪಕ್ಷ ಬಿಡ್ತಾರೆ ಅನ್ನೋ ವದಂತಿಗೆ ಫುಲ್​ಸ್ಟಾಪ್ ಬಿದ್ದಂತಾಗಿದೆ. ಆದರೆ ಶಾಸಕರು ಬೀಸೋ ದೊಣ್ಣೆಯಿಂದ ತಪ್ಪಿಸ್ಕೊಳ್ಳೋಕೆ ಈ ರೀತಿ ಹೇಳ್ತಿದ್ದಾರೆ ಅನ್ನೋ ಮಾತುಗಳೂ ಕೇಳಿ ಬರ್ತಿದೆ.

ಸಿಎಲ್​ಪಿ ಸಭೆಗೆ ಗೈರಾಗಿದ್ದ ರಮೇಶ್​ ಜಾರಕಿಹೊಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ನೋಟಿಸ್ ನೀಡಿದ್ರು. ನೋಟಿಸ್​ಗೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ “ನಾನು ಯಾವುದೇ ಕಾರಣಕ್ಕೂ ಪಕ್ಷ ತೊರೆಯಲ್ಲ. ಮಗನ ಮದುವೆ ವಿಚಾರದಲ್ಲಿ ಬ್ಯುಸಿ ಇದ್ದೆ” ಅಂತ ಪ್ರತಿಕ್ರಿಯಿಸಿದ್ದಾರೆ. ಕುಮಟಳ್ಳಿ, ನಾಗೇಂದ್ರ, ಉಮೇಶ್ ಜಾಧವ್ ಕೂಡ ನೋಟಿಸ್​​ಗೆ ಉತ್ತರ ನೀಡಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments