Friday, March 29, 2024

ದೇವೇಗೌಡ್ರು, ಕುಮಾರಸ್ವಾಮಿ, ರಾಹುಲ್​ ಗಾಂಧಿ ಟಿಕೆಟ್ ಹಂಚಿಕೆ ತೀರ್ಮಾನ ತಗೊಳ್ತಾರಂತೆ!

ಬೀದರ್ : ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ್ರು, ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ಎಪಿಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರು ಜಿಲ್ಲೆಯ ಲೋಕಸಭಾ ಸೀಟು ಹಂಚಿಕೆ ತೀರ್ಮಾನ ತೆಗೆದುಕೊಳ್ತಾರೆ ಅಂತ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ರು. ಈ ಮೂಲಕ ‘ಲೋಕ’ ಸಮರದಲ್ಲಿ ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸೂಚನೆ ನೀಡಿದ್ರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಟಿಕೆಟ್​ ಹಂಚಿಕೆಯಾಗಬೇಕು. ಮಾಜಿ ಪ್ರಧಾನಿ ಎಚ್.ಡಿ ದೇವೆಗೌಡ್ರು, ಸಿಎಂ ಕುಮಾರಸ್ವಾಮಿ ಹಾಗೂ ಎಐಸಿಸಿ ಅಧ್ಯಕ್ಷ್ಯ ರಾಹುಲ್ ಗಾಂಧಿ ಅವರು ಯಾವ ಜಿಲ್ಲೆ ಜೆಡಿಎಸ್​ಗೆ ಬಿಡಬೇಕು ಎಂದು ಟಿಕೆಟ್ ಹಂಚಿಕೆಯ ಬಗ್ಗೆ ತೀರ್ಮಾನ ತೆಗೆದು ಕೊಳ್ತಾರೆ. ಸಮ್ಮಿಶ್ರ ಸರ್ಕಾರ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಕೂಡ ಇದೇ ಮಾದರಿಯಲ್ಲಿ ಕೆಲಸ ಮಾಡಲಾಗುವುದು ಎಂದು ಹೇಳಿದ್ರು.

RELATED ARTICLES

Related Articles

TRENDING ARTICLES