Thursday, April 25, 2024

ಸಿದ್ದರಾಮಯ್ಯ ಅವರಿಗೆ ರಾಹುಲ್​​ ಗಾಂಧಿ ಕೊಟ್ಟ ಖಡಕ್​ ಸೂಚನೆ ಏನ್ ಗೊತ್ತಾ?

ನವದೆಹಲಿ : ರಾಜ್ಯದಲ್ಲಿನ ‘ದೋಸ್ತಿ’ ಮುನಿಸು ಕಾಂಗ್ರೆಸ್​ ಹೈಕಮಾಂಡ್​​ಗೆ ದೊಡ್ಡ ತಲೆನೋವಾಗಿದೆ. ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಅವರ ಬಗ್ಗೆ ಬೇಕಾಬಿಟ್ಟಿ ಹೇಳಿಕೆ ನೀಡುತ್ತಾ… ತಮ್ಮ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯನವರ ಗುಣಗಾನ ಮಾಡೋದ್ರಲ್ಲಿ ಬ್ಯುಸಿ ಇದ್ದಾರೆ. ಇದರಿಂದ ಜೆಡಿಎಸ್​-ಕಾಂಗ್ರೆಸ್​ ಮೈತ್ರಿ ಮುರಿದು ಬೀಳುವ ಸಾಧ್ಯತೆ ಇದೆ.
ಕಾಂಗ್ರೆಸ್​ ಶಾಸಕರು ಮನಬಂದಂತೆ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್​ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಕಾಂಗ್ರೆಸ್​ ನಾಯಕರಿಗೆ ಚಾಟಿ ಬೀಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿಮ್ಮ ಬೆಂಬಲಿಗರನ್ನು ಹದ್ದುಬಸ್ತಿನಲ್ಲಿಡಿ ಎಂದು ಖಡಕ್​ ಸೂಚನೆ ನೀಡಿದ್ದಾರೆ.
‘ನಿಮ್ಮ ಅನುಯಾಯಿಗಳೇ ಹೆಚ್ಚು ಮಾತಾಡ್ತಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಕಾಂಗ್ರೆಸ್​ಗೆ ಅಗತ್ಯ. ನಿಮ್ಮ ಬೆಂಬಲಿಗರ ಹೇಳಿಕೆಗಳಿಂದ ಸರ್ಕಾರಕ್ಕೆ ತೊಂದರೆ ಆಗುತ್ತಿದೆ. ಇದು ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಡ್ಯಾಮೇಜ್ ಮಾಡುತ್ತದೆ.ಪಕ್ಷ ಹೇಳಿದ ಹಾಗೆ ಶಾಸಕರು ಕೇಳಬೇಕು’ ಎಂದು ರಾಹುಲ್​ ಗಾಂಧಿ ಸಿದ್ದರಾಮಯ್ಯ ಅವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES

Related Articles

TRENDING ARTICLES