ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಆಡಿಯೋ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಆಪರೇಷನ್ ಕಮಲದ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ಅವರು ಯಡಿಯೂರಪ್ಪ ಅವರ ವಿರುದ್ಧ ಗರಂ ಆದರು. ಆಷ್ಟೇ ಅಲ್ಲದೇ ಅವರ ವಿರುದ್ಧ ಆಡಿಯೋವೊಂದನ್ನು ರಿಲೀಸ್ ಕೂಡ ಮಾಡಿದ್ರು.
ಗುರುಮಿಠಕಲ್ ಶಾಸಕ ನಾಗನಗೌಡ ಅವರಿಗೆ ಬಿಜೆಪಿ ಆಮಿಷವನ್ನೊಡ್ಡಿದೆ ಅಂತ ಆರೋಪ ಮಾಡಿರುವ ಸಿಎಂ, ನಾಗನಗೌಡ ಅವರ ಮಗ ಶರಣಗೌಡ ನಾಯಕ ಅವರ ಜೊತೆ ಯಡಿಯೂರಪ್ಪ ಮಾತನಾಡಿದ್ದಾರೆ ಎನ್ನಲಾಗಿರೋ ಆಡಿಯೋವೊಂದನ್ನು ಬಿಡುಗಡೆ ಮಾಡಿದರು.
25 ಕೋಟಿ ರೂ ಹಣ ನೀಡುತ್ತೇವೆ. ಚುನಾವಣೆಯಲ್ಲಿ ಟಿಕೆಟ್ ನೀಡುತ್ತೇವೆ. ಗೆದ್ದ ನಂತರ ಜಿಲ್ಲಾ ಉಸ್ತುವಾರಿ ಮಂತ್ರಿ ಮಾಡ್ತೀವಿ, ಪ್ರಭಾವಿ ಖಾತೆಯನ್ನೂ ನೀಡುತ್ತೇವೆ ಎಂದು ಯಡಿಯೂರಪ್ಪ ಆಮಿಷವೊಡ್ಡಿದ್ದಾರೆಂದು ಹೇಳಲಾಗುತ್ತಿದೆ.
ಶರಣಗೌಡ ಅವರಿಗೆ ಮುಂಬೈಗೆ ಹೋಗುವಂತೆ ಯಡಿಯೂರಪ್ಪ ತಿಳಿಸಿದ್ದಾರಂತೆ. ಅಲ್ಲಿ ವಿಜಯೇಂದ್ರ ಅವರು ಅಲ್ಲಿ ಹಣಕಾಸು ವ್ಯವಹಾರ ನೋಡಿಕೊಳ್ತಾರೆ ಎಂದಿದ್ದೂ ಅಲ್ಲದೆ ‘ಬ್ರದರ್ 50 ಕೋಟಿ ರೂ ಕೊಟ್ಟು ಸ್ಪೀಕರ್ ಅವರನ್ನೇ ಬುಕ್ ಮಾಡಿದ್ದೀವಿ. ಇದೆಲ್ಲದರ ಜೊತೆಗೆ ಕೇಸ್ ದಾಖಲಾದ್ರೆ ಅಮಿತ್ ಶಾ, ಮೋದಿ ಜಡ್ಜ್ಗಳ ಜೊತೆ ನೋಡಿಕೊಳ್ತಾರೆ’ ಅಂತ ಹೇಳಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.
ಯಡಿಯೂರಪ್ಪ ವಿರುದ್ಧ ಕುಮಾರಸ್ವಾಮಿ ಸಿಡಿಸಿದ್ರು ಆಡಿಯೋ ಬಾಂಬ್..!
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


