Saturday, July 27, 2024

ಈಶ್ವರಪ್ಪಗೆ ಮೆದುಳು ಸರಿಯಾಗಿ ಕೆಲಸ ಮಾಡ್ತಿಲ್ಲ : ಸಿದ್ದರಾಮಯ್ಯ

ವಿಜಯಪುರ : ಬಿಜೆಪಿ ಮುಖಂಡ ಕೆ.ಎಸ್​ ಈಶ್ವರಪ್ಪ ಅವರಿಗೆ ಮೆದುಳು ಸರಿಯಾಗಿ ಕೆಲಸ ಮಾಡ್ತಿಲ್ಲ ಅಂತ ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮತಿ ಅಧ್ಯಕ್ಷ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಆಡಿಯೋ ಪ್ರಕರಣದಲ್ಲಿ ಮುಖ್ಯಮಂತ್ರಿ ಹೆಚ್,ಡಿ ಕುಮಾರಸ್ವಾಮಿ ಅವರನ್ನು ಸಿಲುಕಿಸಲು ಸಿದ್ದರಾಮಯ್ಯ ಎಸ್​ಐಟಿ ತನಿಖೆಗೆ ಒತ್ತಾಯಿಸಿದ್ದು ಎಂಬ ಈಶ್ವರಪ್ಪ ಅವರ ಹೇಳಿಕೆ ವಿರುದ್ಧ ಅವರು (ಸಿದ್ದರಾಮಯ್ಯ) ಗರಂ ಆಗಿ ವಾಗ್ದಾಳಿ ನಡೆಸಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ”ಈಶ್ವರಪ್ಪ ಅವರಿಗೆ ಮೆದುಳು ಸರಿಯಾಗಿ ಕೆಲಸ ಮಾಡ್ತಿಲ್ಲ. ಹೀಗಾಗಿ ಬಾಯಿಗೆ ಬಂದಂಗೆ ಮಾತನಾಡ್ತಾರೆ. ಬಿಎಸ್​ವೈ ಆಡಿಯೋ ಪ್ರಕರಣವನ್ನು ಮುಖ್ಯಮಂತ್ರಿಗಳು ಎಸ್​ಐಟಿ ತನಿಖೆಗೆ ಒಪ್ಪಿಸಿದ್ದಾರೆ. ನಾವು ತನಿಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ. ಯಾರು ತಪ್ಪು ಮಾಡಿದ್ರೂ ಶಿಕ್ಷೆ ಅನುಭವಿಸಲೇ ಬೇಕು” ಎಂದರು.

RELATED ARTICLES

Related Articles

TRENDING ARTICLES