ಚಂಡೀಗಢ : ಸೆಲಬ್ರಿಟಿ ಕ್ರಿಕೆಟ್ ಲೀಗ್ನ (ಸಿಸಿಎಲ್) 2ನೇ ಪಂದ್ಯದಲ್ಲೂ ಕರ್ನಾಟಕ ಬುಲ್ಡೋಜರ್ಸ್ ಗೆಲುವು ಸಾಧಿಸಿದ್ದು, ಸೆಮಿಫೈನಲ್ ಪ್ರವೇಶಿಸೋದು ಬಹುತೇಕ ಖಚಿತವಾಗಿದೆ.
ನಿನ್ನೆ ನಡೆದ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಗೆದ್ದಿದ್ದ ಪ್ರದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ಇಂದು ನಡೆದ 2 ನೇ ಮ್ಯಾಚ್ನಲ್ಲಿ ತೆಲುಗು ವಾರಿಯರ್ಸ್ ವಿರುದ್ಧ 54ರನ್ಗಳ ಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ನಿಗಧಿತ 10 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 122 ರನ್ಗಳನ್ನು ಗಳಿಸಿತು. ಭಜರಂಗಿ ಲೋಕಿ ಮತ್ತು ರಾಜೀವ್ ತಲಾ 30ರನ್ಗಳನ್ನು ಕೃಷ್ಣ ಅವರು 16ರನ್ಗಳನ್ನು ಬಾರಿಸಿ ಬೃಹತ್ ಮೊತ್ತಕ್ಕೆ ನೆರವಾದರು. ಗುರಿ ಬೆನ್ನತ್ತಿದ ತೆಲುಗು ವಾರಿಯರ್ಸ್ ಕೇವಲ 68ರನ್ಗಳನ್ನು ಗಳಿಸಲಷ್ಟೇ ಶಕ್ತವಾಗಿ ಸೋಲಪ್ಪಿಕೊಂಡಿತು.