Wednesday, April 24, 2024

‘ಮೋದಿ ಬಗ್ಗೆ ಜನರಿಗೂ ಗೊತ್ತಾಗಿದೆ’ : ಡಿಸಿಎಂ

ಆನೇಕಲ್ : ಪ್ರಧಾನಿ ನರೇಂದ್ರ ಅವರ ಬಗ್ಗೆ ಜನರಿಗೂ ಗೊತ್ತಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್​ ಹೇಳಿದರು.
ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ರಾಜ್ಯದಲ್ಲಿ ರೈತ ವಿರೋಧಿ ಸರ್ಕಾರವಿದೆ’ ಎಂದು ಹೇಳಿದ್ದರು. ಈ ಹೇಳಿಕೆ ಬಗ್ಗೆ ಗೊಟ್ಟಿಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ ಪರಮೇಶ್ವರ್ ಅವರು, ‘ಜನಕ್ಕೆ ಗೊತ್ತು ಯಾರು ರೈತರ ಪರ ಇದಾರೆ ಅಂತ. ಸಮ್ಮಿಶ್ರ ಸರ್ಕಾರ ರೈತರ ಪರವಾಗಿದೆ. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಜನಕ್ಕೂ ಗೊತ್ತಾಗಿದೆ. ಸುಳ್ಳು ಭರವಸೆ ಕೊಟ್ಟು ಜನರನ್ನು ಮರಳು‌ ಮಾಡ್ತಿದ್ದಾರೆ. ಈ ಬಾರಿ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ’ ಎಂದು ತಿರುಗೇಟು ನೀಡಿದರು.

RELATED ARTICLES

Related Articles

TRENDING ARTICLES