Saturday, April 20, 2024

ರಾಹುಲ್​ ಗಾಂಧಿ ಜೊತೆ ಸೀಟು ಹಂಚಿಕೆ ಚೌಕಾಸಿಗಿಳೀತಾರಾ ಸಿಎಂ?

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​ ಯಡಿಯೂರಪ್ಪ ಈಗಾಗಲೇ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಇಟ್ಕೊಂಡು ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಲು ತೆರಳಿದ್ದಾರೆ. ಇತ್ತ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಅವರು ಕೂಡ ಇಂದು ಮಧ್ಯಾಹ್ನ ನವದೆಹಲಿಗೆ ತೆರಳುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್​ ಗಾಂಧಿ ಅವರನ್ನು ಭೇಟಿ ಮಾಡಿ ಸೀಟು ಹಂಚಿಕೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.
ಈಗಾಗಲೇ ಮಾಜಿ ಪ್ರಧಾನಿ, ಜೆಡಿಎಸ್​ ರಾಷ್ಟ್ರಾಧ್ಯಕ್ಷ ಹೆಚ್​.ಡಿ ದೇವೇಗೌಡ್ರು ರಾಹುಲ್​ ಗಾಂಧಿ ಅವರ ಜೊತೆ ಚರ್ಚಿಸಿದ್ದಾರೆ. ರಾಜ್ಯದಲ್ಲಿ 10 ರಿಂದ 12 ಕ್ಷೇತ್ರಗಳಿಗೆ ಜೆಡಿಎಸ್​ ಪಟ್ಟು ಹಿಡಿದಿದೆ. ಕಾಂಗ್ರೆಸ್ 5 ರಿಂದ 7 ಕ್ಷೇತ್ರ ನೀಡಲು ಮುಂದಾಗಿದೆ. ರಾಹುಲ್​ ಗಾಂಧಿ ಜೊತೆ ಸೀಟು ಹಂಚಿಕೆ ಚೌಕಾಸಿಗಿಳೀತಾರಾ ಸಿಎಂ ಅನ್ನೋದನ್ನು ಕಾದು ನೋಡಬೇಕಿದೆ. ಜೊತೆಗೆ ಅತೃಪ್ತ ‘ಕೈ’ ಶಾಸಕರ ಬಗ್ಗೆಯೂ ಚರ್ಚೆ ನಡೆಸಬಹುದು.

RELATED ARTICLES

Related Articles

TRENDING ARTICLES