Thursday, March 28, 2024

ತುಮಕೂರು ಬಿಟ್ಟು ಹಾಲಿ ಸಂಸದರಿಗೆ ಟಿಕೆಟ್ ಪಕ್ಕಾ..!

ನವದೆಹಲಿ : ತುಮಕೂರು ಹೊರತು ಪಡಿಸಿ ಉಳಿದೆಲ್ಲಾ ಕಾಂಗ್ರೆಸ್ ಸಂಸದರಿಗೆ ಟಿಕೆಟ್​ ಪಕ್ಕಾ ಆಗಿದೆ. ಕಾಂಗ್ರೆಸ್​ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ತಮ್ಮ ಕ್ಷೇತ್ರಗಳಲ್ಲಿ ಕೆಲಸ ಆರಂಭಿಸಲು ಸಂಸದರಿಗೆ ಸಂದೇಶ ರವಾನಿಸಲಾಗಿದೆ.
7 ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಟ್ಟು ಕೊಡುವ ಬಗ್ಗೆ ಕಾಂಗ್ರೆಸ್ ಚರ್ಚೆ ನಡೆಸಿದೆ. ಮೈಸೂರು ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಹೈಕಮಾಂಡ್​ ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ.
ತುಮಕೂರು ಹೊರತುಪಡಿಸಿದರೆ ಚಿಕ್ಕೋಡಿ, ಕಲಬುರಗಿ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಲ್ಲಿ ಹಾಲಿ ಕಾಂಗ್ರೆಸ್ ಸಂಸದರಿದ್ದು, ಅವರಿಗೆಲ್ಲಾ ಟಿಕೆಟ್ ಕನ್ಫರ್ಮ್ ಆಗಿದೆ. ತುಮಕೂರು ಎಂಪಿ ಎಸ್​.ಪಿ ಮುದ್ದಹನುಮೇಗೌಡ ಮಾತ್ರ ಇನ್ನೂ ಟಿಕೆಟ್​ ಪಕ್ಕಾ ಆಗಿಲ್ಲ. ಮಾರ್ಚ್​ 16ಕ್ಕೆ ಮೊದಲ ಹಂತದ ಕ್ಷೇತ್ರಗಳ ಪಟ್ಟಿ, 2ನೇ ಹಂತದ ಪಟ್ಟಿ ಮಾರ್ಚ್​ 19ರಂದು ಬಿಡುಗಡೆಯಾಗಲಿದೆ.

RELATED ARTICLES

Related Articles

TRENDING ARTICLES