Thursday, April 25, 2024

ದೋಸ್ತಿಗಳ ಮಧ್ಯೆ ಬಿರುಕು ಮೂಡಿಸಿದ ತುಮಕೂರು ವಾರ್..!

ತುಮಕೂರು: ಸೀಟು ಹಂಚಿಕೆ ವಿಚಾರ ದೋಸ್ತಿಗೆ ಸವಾಲಾಗಿ ಪರಿಣಮಿಸಿದ್ದು ತುಮಕೂರು ವಾರ್​ ಈಗ ದೋಸ್ತಿಗಳ ಮಧ್ಯೆ ಬಿರುಕು ಮೂಡಿಸಿದೆ. ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿರೋದಕ್ಕೆ ಜಿಲ್ಲಾ ಕಾಂಗ್ರೆಸ್​ ಮುಖಂಡರು ಪಕ್ಷದ ವರಿಷ್ಠರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರು ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿರೋದನ್ನು ಪ್ರಶ್ನಿಸಿ ಮುದ್ದಹನುಮೇಗೌಡ ಬೆಂಬಲಿಗರು ಮಲ್ಲಿಕಾರ್ಜುನ್​ ಖರ್ಗೆ ಅವರನ್ನು ಭೇಟಿ ಮಾಡಲಿದ್ದಾರೆ. ತುಮಕೂರು ಕ್ಷೇತ್ರ ಬಿಟ್ಟುಕೊಡುವ ಸಂಬಂಧ ಡಿಸಿಎಂ ಪರಮೇಶ್ವರ್‌ ಅವರ ಮನವಿಯನ್ನೂ ಜೆಡಿಎಸ್​ ವರಿಷ್ಠ ಹೆಚ್.ಡಿ. ದೇವೇಗೌಡರು ತಿರಸ್ಕರಿಸಿದ್ದಾರೆ. ದೇವೇಗೌಡರ ವಿರುದ್ಧ ಮಾಜಿ ಶಾಸಕ ಕೆ.ಎನ್​. ರಾಜಣ್ಣ ಬಹಿರಂಗ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES