Friday, March 29, 2024

‘ಲೋಕ’ಸಮರಕ್ಕೆ ದೋಸ್ತಿ ಸಿದ್ಧತೆ – 31ಕ್ಕೆ ಬೃಹತ್​ ಸಮಾವೇಶ

ಬೆಂಗಳೂರು: ಲೋಕಸಭಾ ಚುನಾವಣೆ ಡೇಟ್ ಫಿಕ್ಸ್​ ಆಗಿದ್ದು, ಪ್ರಚಾರ ಕಾರ್ಯವೂ, ಸಭೆಗಳೂ, ಸೀಟು ಹಂಚಿಕೆಯ ಕೆಲಸಗಳು ಭರದಿಂದ ಸಾಗಿದೆ. ಈ ಹಿನ್ನೆಲೆ ಮೈತ್ರಿ ಸರ್ಕಾರದ ಪ್ರಮುಖರು ಅಶೋಕ ಹೋಟೆಲ್​ನಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್​. ಡಿ. ದೇವೇಗೌಡ ಅವರು “ಕಾಂಗ್ರೆಸ್​ ಅಧ್ಯಕ್ಷ ರಾಹುಲ್ ಗಾಂಧಿ ಅವರ ಅನುಮತಿಯೊಂದಿಗೆ ಮಾರ್ಚ್​ 31ರಂದು ಬೃಹತ್​ ಸಮಾವೇಶ ನಡೆಸಲಾಗುತ್ತದೆ. ರಾಹುಲ್​ ಗಾಂಧಿ ಅವರು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಂಗ್ರೆಸ್​ ಹಾಗೂ ಜೆಡಿಎಸ್​ ಜಂಟಿಯಾಗಿ ಪ್ರಚಾರ ಕಾರ್ಯ ನಡೆಸಲಿದ್ದು, ಒಟ್ಟಿಗೆ ಶಕ್ತಿ ಪ್ರದರ್ಶನ ನಡೆಸಲಿವೆ. 28 ಕ್ಷೇತ್ರಗಳಲ್ಲಿ ದೋಸ್ತಿ ನಾಯಕರು ಗೆಲುವನ್ನು ಪಡೆಯಲಿದ್ದಾರೆ. ಒಟ್ಟು 28 ಕ್ಷೇತ್ರಗಳಲ್ಲಿ 8ಕ್ಷೇತ್ರಗಳಲ್ಲಿ ಜೆಡಿಎಸ್​ ಅಭ್ಯರ್ಥಿಗಳೂ, 20ಕ್ಷೇತ್ರಗಳಲ್ಲಿ ಕಾಂಗ್ರೆಸ್​ ನಾಯಕರು ಸ್ಪರ್ಧಿಸಲಿದ್ದಾರೆ” ಅಂತ ಹೇಳಿದ್ದಾರೆ.

ಮಾಜಿ ಪ್ರಧಾನಿ ಹೆಚ್​. ಡಿ. ದೇವೇಗೌಡ, ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿ.ಕೆ. ಶಿವಕುಮಾರ್​ ಅವರೂ ಸಭೆಯಲ್ಲಿ ಭಾಗವಹಿಸಿದ್ದರು.

RELATED ARTICLES

Related Articles

TRENDING ARTICLES