Friday, March 29, 2024

ಮಂಡ್ಯದಲ್ಲಿ ದೇವೇಗೌಡರ ಕುಟುಂಬದ ವಿರುದ್ಧ ಹೆಚ್ಚಿದ ಆಕ್ರೋಶ..!

ಮಂಡ್ಯ : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಸ್ಟಾರ್​ವಾರ್​ಗೆ ಸಾಕ್ಷಿಯಾಗಿರುವ ಮಂಡ್ಯದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದೆ.
ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಕಣಕ್ಕಿಳಿಯುತ್ತಿದ್ದಾರೆ. ಅವರ ಪ್ರತಿಸ್ಪರ್ಧಿಯಾಗಿ ಪಕ್ಷೇತರರಾಗಿ ಸುಮಲತಾ ಅಂಬರೀಶ್ ಅವರು ಕಣಕ್ಕಿಳಿದಿದ್ದಾರೆ.
ಈ ನಡುವೆ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ದೇವೇಗೌಡರ ಕುಟುಂಬದ ವಿರುದ್ಧ ಮಂಡ್ಯದಲ್ಲಿ ಜನಾಕ್ರೋಶ ಹೆಚ್ಚುತ್ತಿದೆ. ಸಿಎಂ ಕುಮಾರಸ್ವಾಮಿ, ಸಚಿವ ಹೆಚ್​.ಡಿ ರೇವಣ್ಣ ಅವರು ನೀಡಿರುವ ಹೇಳಿಕೆಗೆಳು ನಿಖಿಲ್​ ಅವರಿಗೆ ಆಘಾತವನ್ನುಂಟು ಮಾಡುವ ಸಾಧ್ಯತೆ ಇದೆ. ಈ ಹಿಂದೆ ಗೋ ಬ್ಯಾಕ್​ ನಿಖಿಲ್ ಕ್ಯಾಂಪೇನ್ ಜೋರಾಗಿ ನಡೆದಿತ್ತು. ಈಗ ದೇವೇಗೌಡರ ಇಡೀ ಕುಟುಂಬದ ವಿರುದ್ಧ ನೆಟ್ಟಿಗರು ಮುಗಿ ಬಿದ್ದಿದ್ದಾರೆ.
ಕೆಆರ್​ಎಸ್​ಗೆ ಹೇಮಾವತಿ ನೀರು ಬಿಡುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ರು ದೇವೇಗೌಡ್ರು. ಆದ್ರೆ ಈಗ ಮಂಡ್ಯವನ್ನು ಗುತ್ತಿಗೆ ಪಡೆಯೋಕೆ ಬಂದಿದ್ದಾರೆ ಅಂತ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.
ಚಿತ್ರರಂಗದ ವಿರುದ್ಧ ಸಿಎಂ ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ಬಗ್ಗೆ. ‘ನೀವೂ ಬಣ್ಣ ಹಚ್ಚಿದವರೇ ಮರೆಯಬೇಡಿ’ ಎಂದು ಕಿಡಿಕಾರಿದ್ದಾರೆ ನೆಟ್ಟಿಗರು.

RELATED ARTICLES

Related Articles

TRENDING ARTICLES