Thursday, April 25, 2024

ಪ್ರಜ್ವಲ್ ನಾಮಪತ್ರ ಸಲ್ಲಿಕೆ – ಸೂಚಕರಾಗಿ ಸಹಿ ಹಾಕಿದ್ರು ಸಿಎಂ..!

ಹಾಸನ: ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್​ ರೇವಣ್ಣ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಪ್ರಜ್ವಲ್ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದ್ದಾರೆ.

ಸಾವಿರಾರು ಕಾರ್ಯಕರ್ತರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರಜ್ವಲ್ ಅವರು ಪಕ್ಷದ ವರಿಷ್ಠರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಪ್ರಜ್ವಲ್​ ಬೆಂಬಲಿಗರು ಭರ್ಜರಿ ರೋಡ್ ಶೋ ನಡೆಸಿದರು. ಇದರಲ್ಲಿ ಕಾಂಗ್ರೆಸ್​ ಕಾರ್ಯಕರ್ತರೂ ಭಾಗಿಯಾಗಿದ್ದರು.  ಈ ಸಂದರ್ಭ ಮಾಜಿ ಪ್ರಧಾನಿ ದೇವೇಗೌಡರು, ಸಚಿವ ರೇವಣ್ಣ, ಭವಾನಿ ರೇವಣ್ಣ, ಜಿ.ಟಿ.ದೇವೇಗೌಡ, ಶಾಸಕರಾದ ಎ.ಟಿ.ರಾಮಸ್ವಾಮಿ, ಕುಮಾರಸ್ವಾಮಿ, ಲಿಂಗೇಶ್, MLC ಗೋಪಾಲಸ್ವಾಮಿ, ಗಾಯತ್ರಿ ಶಾಂತೇಗೌಡ ಭಾಗಿಯಾಗಿದ್ದಾರೆ. 

RELATED ARTICLES

Related Articles

TRENDING ARTICLES