Friday, April 26, 2024

ಮಂಡ್ಯದಲ್ಲಿ ಸುಮಲತಾಗೆ ಬಿಜೆಪಿ ಬಲ..!

ಬೆಂಗಳೂರು : ಬಿಜೆಪಿ ಮಂಡ್ಯದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ಬೆಂಬಲ ನೀಡಲು ನಿರ್ಧರಿಸಿದೆ. ಸುಮಲತಾ ಅವರು ಕಣಕ್ಕಿಳಿಯುತ್ತಾರೆ ಎಂದು ತಿಳಿದಲ್ಲಿಂದಲೂ ಬಿಜೆಪಿ ಅವರಿಗೇ ಬೆಂಬಲ ನೀಡಲಿದೆ ಎಂದು ತಿಳಿದುಬಂದಿತ್ತು. ಸುಮಲತಾ ಅವರು ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ್ದರು. ಆದರೆ, ಬಿಜೆಪಿಯ ಅಂತಿಮ ನಿರ್ಧಾರ ಹೊರಬಂದಿರಲಿಲ್ಲ. ಇಂದು ನಿರ್ಧಾರ ಪ್ರಕಟಿಸಿದೆ.
ಇನ್ನು ಕೋಲಾರ ಕ್ಷೇತ್ರಕ್ಕೆ ಮುನಿಸ್ವಾಮಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದು ಇದು ಬಿಜೆಪಿಯ ಅಚ್ಚರಿಯ ಆಯ್ಕೆಯಾಗಿದೆ. ಅಲ್ಲಿ ಛಲವಾದಿ ನಾರಾಯಣಸ್ವಾಮಿ, ಡಿ.ಎಸ್. ವೀರಯ್ಯ ಹೆಸರು ಕೇಳಿಬಂದಿತ್ತು.
ಇನ್ನು ಕೊಪ್ಪಳ, ರಾಯಚೂರು, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಚಿಕ್ಕೋಡಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸದೇ ಕಾದು ನೋಡುವ ತಂತ್ರವನ್ನು ಅನುಸರಿಸಿದೆ.

ರಾಜ್ಯದ ಬಿಜೆಪಿ ರಣಕಲಿಗಳು ಯಾರ‍್ಯಾರು..? ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ..!

RELATED ARTICLES

Related Articles

TRENDING ARTICLES