Tuesday, December 5, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeರಾಜಕೀಯತುಮಕೂರಿನಿಂದಲೇ ಮಾಜಿ ಪ್ರಧಾನಿ ದೇವೇಗೌಡರು ಕಣಕ್ಕೆ..!

ತುಮಕೂರಿನಿಂದಲೇ ಮಾಜಿ ಪ್ರಧಾನಿ ದೇವೇಗೌಡರು ಕಣಕ್ಕೆ..!

ಬೆಂಗಳೂರು: ಮಾಜಿ ಪ್ರಧಾನಿ ಹೆಚ್​. ಡಿ. ದೇವೇಗೌಡ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸ್ತಾರೆ ಅನ್ನೋ ಬಗ್ಗೆ ಗೊಂದಲಗಳಿತ್ತು. ಜನರಲ್ಲಿ ಕುತೂಹಲವೂ ಇತ್ತು. ಈಗ ಇವೆಲ್ಲ ಗೊಂದಲಗಳಿಗೆ ತೆರೆಬಿದ್ದಿದ್ದು, ತುಮಕೂರಿನಿಂದಲೇ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರು ಕಣಕ್ಕೆ ಇಳಿಯೋದು ಪಕ್ಕಾ ಆಗಿದೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ದೇವೇಗೌಡರು ಕಣಕ್ಕಿಳಿಯಲಿದ್ದಾರೆ. ಮಾ.25ರಂದು ಹೆಚ್​.ಡಿ ದೇವೇಗೌಡ ಅವರು ನಾಮಪತ್ರ ಸಲ್ಲಿಸಲಿದ್ದು ಜೆಡಿಎಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆ ಇನ್ನಷ್ಟು ಚುರುಕುಗೊಂಡಿದೆ. ಅಂತೂ ಪಕ್ಷದ ಕಾರ್ಯಕರ್ತರ ಒತ್ತಾಯಕ್ಕೆ ಸ್ಪರ್ಧೆಗೆ ಒಪ್ಪಿರೋ ದೊಡ್ಡಗೌಡರು ಕ್ಷೇತ್ರವನ್ನೂ ಆರಿಸಿಕೊಂಡಾಗಿದೆ. ಶಾಸಕ ಗೌರಿಶಂಕರ್ ಅವರು ದೇವೇಗೌಡರನ್ನು ತುಮಕೂರಿನಿಂದ ಸ್ಪರ್ಧಿಸುವಂತೆ ಮನವಿ ಮಾಡಿದ್ದರು.

LEAVE A REPLY

Please enter your comment!
Please enter your name here

Most Popular

Recent Comments