Saturday, April 20, 2024

ತುಮಕೂರಿನಿಂದಲೇ ಮಾಜಿ ಪ್ರಧಾನಿ ದೇವೇಗೌಡರು ಕಣಕ್ಕೆ..!

ಬೆಂಗಳೂರು: ಮಾಜಿ ಪ್ರಧಾನಿ ಹೆಚ್​. ಡಿ. ದೇವೇಗೌಡ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸ್ತಾರೆ ಅನ್ನೋ ಬಗ್ಗೆ ಗೊಂದಲಗಳಿತ್ತು. ಜನರಲ್ಲಿ ಕುತೂಹಲವೂ ಇತ್ತು. ಈಗ ಇವೆಲ್ಲ ಗೊಂದಲಗಳಿಗೆ ತೆರೆಬಿದ್ದಿದ್ದು, ತುಮಕೂರಿನಿಂದಲೇ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರು ಕಣಕ್ಕೆ ಇಳಿಯೋದು ಪಕ್ಕಾ ಆಗಿದೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ದೇವೇಗೌಡರು ಕಣಕ್ಕಿಳಿಯಲಿದ್ದಾರೆ. ಮಾ.25ರಂದು ಹೆಚ್​.ಡಿ ದೇವೇಗೌಡ ಅವರು ನಾಮಪತ್ರ ಸಲ್ಲಿಸಲಿದ್ದು ಜೆಡಿಎಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆ ಇನ್ನಷ್ಟು ಚುರುಕುಗೊಂಡಿದೆ. ಅಂತೂ ಪಕ್ಷದ ಕಾರ್ಯಕರ್ತರ ಒತ್ತಾಯಕ್ಕೆ ಸ್ಪರ್ಧೆಗೆ ಒಪ್ಪಿರೋ ದೊಡ್ಡಗೌಡರು ಕ್ಷೇತ್ರವನ್ನೂ ಆರಿಸಿಕೊಂಡಾಗಿದೆ. ಶಾಸಕ ಗೌರಿಶಂಕರ್ ಅವರು ದೇವೇಗೌಡರನ್ನು ತುಮಕೂರಿನಿಂದ ಸ್ಪರ್ಧಿಸುವಂತೆ ಮನವಿ ಮಾಡಿದ್ದರು.

RELATED ARTICLES

Related Articles

TRENDING ARTICLES