ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಬಿಜೆಪಿ ಬಿಗ್ ಆಫರ್ ನೀಡಿತ್ತಂತೆ..! ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರೇ ಇಂಥಾ ಒಂದು ಸ್ಫೋಟಕ ವಿಷಯವನ್ನು ಬಹಿರಂಗ ಪಡಿಸಿದ್ದಾರೆ.
ಎಎನ್ಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ದೇವೇಗೌಡರು ಈ ಹೇಳಿಕೆಯನ್ನು ನೀಡಿದ್ದಾರೆ. ”ಮುಂಬೈನಲ್ಲಿ ಭಾರೀ ಮೊತ್ತದ ಹಣ ರೆಡಿಯಾಗಿತ್ತು. ತಮ್ಮ ಜೊತೆ ಕೈ ಜೋಡಿಸಲು ಜೆಡಿಎಸ್ಗೆ ಬಿಜೆಪಿ ಆಫರ್ ನೀಡಿತ್ತು. ಜೆಡಿಎಸ್ ಸರ್ಕಾರ ರಚನೆಗೆ ಬಿಜೆಪಿ ಬೆಂಬಲ ಕೂಡ ನೀಡಿತ್ತು ” ಎಂದಿದ್ದಾರೆ.
ವಿಧಾನಸಭಾ ಚುನಾವಣಾ ವೇಳೆಯಲ್ಲಿ ಬಿಜೆಪಿ ಬಿಗ್ ಆಫರ್ ನೀಡಿತ್ತು. ಚುನಾವಣಾ ಖರ್ಚಿಗಾಗಿ ದೊಡ್ಡಮೊತ್ತದ ಹಣ ಕೊಡಲು ಬಿಜೆಪಿಯವರು ಮುಂದೆ ಬಂದಿದ್ದರಂತೆ. ಕುಮಾರಸ್ವಾಮಿ ಅವರಿಗಾಗಿ ಬಿಜೆಪಿಯವರು ಕಾಯ್ತಿದ್ರಂತೆ. ಆದರೆ, ಕುಮಾರಸ್ವಾಮಿ ಅವರು ಈ ಹಣ ನಿರಾಕರಿಸಿದ್ರಂತೆ. ಅಮಿತ್ ಶಾ ದೇವೇಗೌಡರ ಭೇಟಿಗೂ ಪ್ರಯತ್ನ ಪಟ್ಟಿದ್ರಂತೆ.
ಚುನಾವಣಾ ವೇಳೆಯಲ್ಲಿ ದೇವೇಗೌಡರು ತಮ್ಮ ಬತ್ತಳಿಕೆಯಲ್ಲಿನ ಒಂದೊಂದೇ ಅಸ್ತ್ರವನ್ನು ಪ್ರಯೋಗಿಸುತ್ತಿದ್ದಾರೆ. ಇತ್ತೀಚೆಗೆ ಮಲ್ಲಿಕಾರ್ಜುನ್ ಖರ್ಗೆ ಸಿಎಂ ಮಾಡಲು ಸೋನಿಯಾ ಗಾಂಧಿ ಒಪ್ಪಲಿಲ್ಲ ಅಂದಿದ್ರು. ಡಿಸಿಎಂ ಪರಮೇಶ್ವರ್ ಬಂದು ತುಮಕೂರಲ್ಲಿ ನಿಲ್ಲಲು ಆಹ್ವಾನಿಸಿದ್ರು ಎಂದಿದ್ರು.ಈಗ ಬಿಜೆಪಿಯ ದುಡ್ಡಿನ ಆಫರ್ ನೀಡಿತ್ತು ಎಂದು ಹೇಳಿಕೆ ನೀಡಿದ್ದಾರೆ.
ಬಿಜೆಪಿಯಿಂದ ಸಿಎಂ ಕುಮಾರಸ್ವಾಮಿಗೆ ಬಂದಿತ್ತಂತೆ ಬಿಗ್ ಆಫರ್..!
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


