Saturday, July 27, 2024

ಧಾರವಾಡ ಟಿಕೆಟ್​ ಬಿಕ್ಕಟ್ಟು – ಸಂಜೆಯೊಳಗೆ ಅಭ್ಯರ್ಥಿ ಅಂತಿಮ

ಹುಬ್ಬಳ್ಳಿ: ಧಾರವಾಡದ ಟಿಕೆಟ್ ಗೊಂದಲ ನಿವಾರಣೆಯಾಗುತ್ತೆ. ಸಂಜೆ ವೇಳೆಗೆ ಅಭ್ಯರ್ಥಿ ಆಯ್ಕೆಯನ್ನು ಹೈಕಮಾಂಡ್ ಅಂತಿಮಗೊಳಿಸಲಿದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಖಾಸಗಿ ಹೋಟೆಲ್​ನಲ್ಲಿ ನಡೆದ ಸಭೆಯ ನಂತರ ಮಾತನಾಡಿದ ಅವರು, “ಹೈಕಮಾಂಡ್​ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುತ್ತಾರೆಂಬ ವಿಶ್ವಾಸ ಇದೆ. ನಮ್ಮ ಅಭಿಪ್ರಾಯವನ್ನು ಹೈಕಮಾಂಡ್​ಗೆ ತಿಳಿಸಿದ್ದೇವೆ” ಅಂತ ಹೇಳಿದ್ದಾರೆ. ಶಾಕೀರ್ ಸನದಿಗೆ ಟಿಕೆಟ್ ನೀಡುವಂತೆ ಅವರ ಬೆಂಬಲಿಗರು ಒತ್ತಾಯಿಸಿದ್ದಾರೆ. ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬೆಂಬಲಿಗರು ಅಲ್ಪಸಂಖ್ಯಾತರನ್ನು ಟಿಕೆಟ್​ ನೀಡದೇ ಕಡೆಗಣಿಸಿದ್ರೆ ತಕ್ಕ ಪಾಠ ಕಲಿಸೋದಾಗಿ ಎಚ್ಚರಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ಪ್ರಬಲ ಟಿಕೆಟ್​ ಆಕಾಂಕ್ಷಿ ಶಾಕೀರ್ ಸನದಿ ಈ ಬಗ್ಗೆ ಪ್ರತಿಕ್ರಿಯಿಸಿ, “ನಾನು ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದೇನೆ. ನನಗೆ ಟಿಕೆಟ್ ಕೊಡ್ತಾರೆ ಎನ್ನುವ ವಿಶ್ವಾಸ ಇದೆ. ಸ್ಥಳೀಯರಿಗೆ ನನ್ನ ಪರಿಚಯ ಇಲ್ಲ ಅನ್ನೋದು ತಪ್ಪು ಕಲ್ಪನೆ. ರಾಜ್ಯದಲ್ಲಿ 2 ಕ್ಷೇತ್ರ ಅಲ್ಪಸಂಖ್ಯಾತರಿಗೆ ಮೀಸಲು ಇದೆ. ಹೀಗಾಗಿ ನನಗೆ ಟಿಕೆಟ್ ನೀಡ್ತಾರೆ ಎನ್ನುವ ವಿಶ್ವಾಸ ಇದೆ” ಅಂತ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.

ಧಾರವಾಡ ಕ್ಷೇತ್ರದ ಮತ್ತೋರ್ವ ಪ್ರಬಲ ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ವಿನಯ್ ಕುಲಕರ್ಣಿ ಈ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿ, “ಸಿದ್ದರಾಮಯ್ಯ ಅವರ ಜೊತೆ ಮುಖಂಡರು ಮಾತನಾಡಿದ್ದಾರೆ. ಚುನಾವಣೆ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದೇನೆ‌. ಯಾಕೆ ಟಿಕೆಟ್ ವಿಳಂಬವಾಗ್ತಿದೆ ಎಂಬುದು ಗೊತ್ತಿಲ್ಲ. ನಾನು ಪಕ್ಷೇತರನಾಗಿ ನಿಲ್ಲುವುದು ಅಸಾಧ್ಯವೇನಲ್ಲ. ಈ ಹಿಂದೆ ಪಕ್ಷೇತರನಾಗಿ ಸ್ಪರ್ಧಿಸಿ ಗೆದ್ದು ಬಂದಿದ್ದೇನೆ” ಅಂತ ಕಾಂಗ್ರೆಸ್ ವರಿಷ್ಠರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES