ಹಾಸನ: ಚನ್ನರಾಯಪಟ್ಟಣ ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮೋದಿ ಭಾವಚಿತ್ರ ಪ್ರದರ್ಶಿಸಿ ಘೋಷಣೆ ಕೂಗಿದ ಘಟನೆ ನಡೆದಿದೆ. ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ ನಿವಾಸದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಮುಖಂಡರು ಭಾಷಣ ಆರಂಭಸುತ್ತಿದ್ದಂತೆ ಗದ್ದಲ ಎಬ್ಬಿಸಿದ್ದು, ನಾವು ಜೆಡಿಎಸ್ಗೆ ಮತ ಹಾಕಲ್ಲ ಬಿಜೆಪಿ ಹಾಕ್ತೀವಿ ಎಂದು ಘೋಷಣೆ ಕೂಗಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿಯವರ ಭಾವಚಿತ್ರ ಪ್ರದರ್ಶಿಸಿ ಘೋಷಣೆಗಳನ್ನ ಕೂಗಿದ್ದು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.