Thursday, April 25, 2024

ಸಿಎಂ ಆಪ್ತರ ಮನೆಗೆ ಐಟಿ ದಾಳಿ – ಮಹತ್ವದ ದಾಖಲೆ ವಶಕ್ಕೆ

ಬೆಂ.ಗ್ರಾಮಾಂತರ: ಸಿಎಂ ಹೆಚ್​. ಡಿ. ಕುಮಾರಸ್ವಾಮಿ ಅವರ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆದಿದೆ. ಹೊಸಕೋಟೆಯ ಜೆಡಿಎಸ್ ಅಧ್ಯಕ್ಷ ವಿ.ಶ್ರೀಧರ್ ಮನೆ ಮೇಲೆ ದಾಳಿ ನಡೆದಿದ್ದು, ಸುಮಾರು 18 ಜನರ ತಂಡ ದಾಳಿ ಮಾಡಿದ್ದಾರೆ. ನಿನ್ನೆ ಬೆಳಗ್ಗೆ 5 ಗಂಟೆಯಿಂದ ರಾತ್ರಿ  9 ಗಂಟೆವರೆಗೆ ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಆದರೆ ದಾಳಿಯ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಶ್ರೀಧರ್ ಅವರ ಮನೆಯಿಂದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ನಾಳೆ ಐಟಿ ಅಧಿಕಾರಿಗಳು ವಿಚಾರಣೆ ನಡೆಸುವ ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES