ಯುಗಾದಿ ಹಬ್ಬದ ಸಂಭ್ರಮ ಸ್ಯಾಂಡಲ್ವುಡ್ನಲ್ಲೂ ಮನೆ ಮಾಡಿದೆ. ಹಬ್ಬದ ಪ್ರಯುಕ್ತ ಸ್ಟಾರ್ ನಟರ ಹಾಗೂ ಹೈ ಬಜೆಟ್ ಮೂವಿಗಳ ಪೋಸ್ಟರ್ಗಳು ಬಿಡುಗಡೆಯಾಗಿವೆ.
ಹ್ಯಾಟ್ರಿಕ್ ಹೀರೊ ಶಿವರಾಜ್ಕುಮಾರ್ ಅಭಿನಯದ ‘ಕವಚ’ ಚಿತ್ರ ತೆರೆ ಕಂಡಿದ್ದು ಅಭಿಮಾನಿಗಳು ಬಹಳ ಖುಷಿಯಲ್ಲಿದ್ದಾರೆ, ಈ ನಡುವೆ ಶಿವಣ್ಣ ತಮ್ಮ ಫ್ಯಾನ್ಸ್ಗೆ ಮತ್ತೊಂದು ಗಿಫ್ಟ್ ನೀಡಿದ್ದಾರೆ.ಅವರ ಅಭಿನಯದ ‘ರುಸ್ತುಂ’ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಈ ಪೋಸ್ಟರ್ನಲ್ಲಿ ಕರುನಾಡ ಚಕ್ರವರ್ತಿ ಶಿವಣ್ಣ ಪೊಲೀಸ್ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ. ಶಿವಣ್ಣನ ಲುಕ್ಗೆ ಫ್ಯಾನ್ಸ್ ಫುಲ್ ಫಿದಾ ಆಗಿದ್ದಾರೆ.
ಇನ್ನು ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರೋ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಸಿನಿಮಾದ ಮತ್ತೊಂದು ಪೋಸ್ಟರ್ ಕೂಡ ರಿಲೀಸ್ ಆಗಿದೆ. ಕಿಚ್ಚನ ಮೀಸೆಯೇ ಈ ಪೋಸ್ಟರ್ನ ಹೈಲೆಟ್. ಇದಲ್ಲದೆ ಸುದೀಪ್ ಮತ್ತು ಅವರ ಪತ್ನಿ ಪ್ರಿಯಾ ಅವರು ಸೇರಿ ಯೂಟ್ಯೂಬ್ ಚಾನಲ್ ಒಂದನ್ನು ಲಾಂಚ್ ಮಾಡಿದ್ದಾರೆ. ಈ ಚಾನಲ್ ಅನ್ನು ಹೊಸ ಪ್ರತಿಭೆಗಳ ಅನಾವರಣಕ್ಕೆ ವೇದಿಕೆ ಮಾಡಿಕೊಳ್ಳಲು ಕಿಚ್ಚ ದಂಪತಿ ಉದ್ದೇಶಿಸಿದ್ದಾರೆ.
ಧ್ರುವ ಸರ್ಜಾ ಅಭಿನಯದ ‘ಪೊಗರು’ ಚಿತ್ರದ ಹೊಸ ಲುಕ್ ಬಿಡುಗಡೆಯಾಗಿದೆ. ಈ ಪೋಸ್ಟರ್ನಲ್ಲಿ ಧ್ರುವ ಲಾಂಗ್ ಹೇರ್ ಜೊತೆಗೆ ರಗಡ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರ ಮನಗೆದ್ದಿರುವ ಪ್ರಿಯಾಂಕ ಉಪೇಂದ್ರ ಅಭಿನಯದ ‘ದೇವಕಿ’ ಚಿತ್ರದ ಪೋಸ್ಟರ್ ಸಹ ರಿಲೀಸ್ ಆಗಿದೆ.
ಈ ಸ್ಟಾರ್ ನಟರ ಚಿತ್ರಗಳ ಮಧ್ಯ ಹೊಸಬರ ಚಿತ್ರವಾದ ಏಕಲವ್ಯ ಚಿತ್ರದ ಪೋಸ್ಟರ್ ಕೂಡ ರಿಲೀಸ್ ಆಗಿದೆ. ಈ ಪೋಸ್ಟರ್ನಲ್ಲಿ ಹೊಸ ನಾಯಕ ನಟ ರಾಣ ಅವರು ಸಖತ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ.
-ಚರಿತ ಪಟೇಲ್
ಯುಗಾದಿ ಹಬ್ಬಕ್ಕೆ ಸ್ಯಾಂಡಲ್ವುಡ್ನಿಂದ ‘ಪೋಸ್ಟರ್ಸ್’ ಗಿಫ್ಟ್..!
RELATED ARTICLES
Recent Comments
on ಕ್ಷಮಿಸಿ ಪಾಕ್ ಅಭಿಮಾನಿಗಳೇ, 10 ನಿಮಿಷದಲ್ಲಿ ಟಿವಿ ಡೆಲಿವರಿ ಮಾಡೋಕೇ ಆಗಲ್ಲ: ಪಾಕ್ನ ಟ್ರೋಲ್ ಮಾಡಿದ ಬ್ಲಿಂಕ್ಇಟ್
on ಗ್ರಾಮಿಣ ಬಾಗದ ಕಾಲೇಜನ್ನು ಬೆಳಗಾವಿಗೆ ಸ್ಥಳಾಂತರ ವಿರುದ್ದ ಸತ್ಯಾಗ್ರಹ ಮಾಡುತ್ತೆನೆ ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


