Tuesday, December 5, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeರಾಜಕೀಯಮಂಡ್ಯದಲ್ಲಿ ಪ್ರಚಾರಕ್ಕೆ ಹಣದ ಬೇಡಿಕೆ ಇಟ್ರಾ ಹಿರಿಯ ನಾಯಕ..?

ಮಂಡ್ಯದಲ್ಲಿ ಪ್ರಚಾರಕ್ಕೆ ಹಣದ ಬೇಡಿಕೆ ಇಟ್ರಾ ಹಿರಿಯ ನಾಯಕ..?

ಮಂಡ್ಯ : ಇಡೀ ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ ಸ್ವಾಮಿ ಅವರಿಗೆ ಪ್ರಬಲ ಸ್ಪರ್ಧೆ ಒಡ್ಡಿರೋದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್. ನಿಖಿಲ್ -ಸುಮಲತಾ ಸ್ಪರ್ಧೆಯಿಂದ ಸ್ಟಾರ್​ವಾರ್​ಗೆ ಸಾಕ್ಷಿಯಾಗಿರುವ ಮಂಡ್ಯದಲ್ಲಿ ಕಾಂಗ್ರೆಸ್​​​ನ ಹಿರಿಯ ನಾಯಕರೊಬ್ಬರ ಮೇಲೆ ಪ್ರಚಾರಕ್ಕೆ ಹಣದ ಬೇಡಿಕೆ ಇಟ್ಟ ಆರೋಪ ಕೇಳಿಬಂದಿದೆ.
ಹೌದು, ಜೆಡಿಎಸ್​ ಅಭ್ಯರ್ಥಿ ಪರ ಪ್ರಚಾರಕ್ಕೆ ಬರಲು ಕಾಂಗ್ರೆಸ್ ಹಿರಿಯ ನಾಯಕ ಜಿ.ಮಾದೇಗೌಡ್ರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಅನ್ನೋ ಮಾತು ಕೇಳಿಬಂದಿದೆ. ಕಾವೇರಿ ಹೋರಾಟಗಾರ ಜಿ. ಮಾದೇಗೌಡ ಅವರದ್ದಿ ಎನ್ನಲಾದ ಸಂಭಾಷಣೆಯೊಂದು ಈಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಮಾದೇಗೌಡ್ರು ಸಚಿವ ಸಿ.ಎಸ್​ ಪುಟ್ಟರಾಜು ಅವರ ಜೊತೆ ನಡೆಸಿದ್ದಾರೆ ಎನ್ನಲಾಗಿರೋ ಸಂಭಾಷಣೆಯದು.
ಮಾದೇಗೌಡ್ರು ಪುಟ್ಟರಾಜು ಅವರ ಬಳಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಅದಕ್ಕೆ ಪುಟ್ಟರಾಜು ಅವರು ನಾನೆಲ್ಲಾ ಅರೆಂಜ್​ ಮಾಡ್ತೀನಿ ಎಂದಿದ್ದಾರೆ ಎನ್ನಲಾಗಿದೆ.
ಇತ್ತೀಚೆಗಷ್ಟೇ ಜಿ. ಮಾದೇಗೌಡ ಮನೆಗೆ ಹೆಚ್​.ಡಿ ಕುಮಾರಸ್ವಾಮಿ ಹೋಗಿದ್ದನ್ನು ಈ ವೇಳೆ ಸ್ಮರಿಸಬಹುದು.

LEAVE A REPLY

Please enter your comment!
Please enter your name here

Most Popular

Recent Comments