Friday, April 26, 2024

ಸಿಎಂ ವಿರುದ್ಧವೇ ಐಟಿ ಅಧಿಕಾರಿಗಳ ದೂರು..!

ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧವೇ ಐಟಿ ಅಧಿಕಾರಿಗಳು ದೂರು ನೀಡಿದ್ದಾರೆ.
ತಮ್ಮ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಐಟಿ ಅಧಿಕಾರಿಗಳು ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಸಿಎಲ್​ಪಿ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಕಂಪ್ಲೇಂಟ್ ನೀಡಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.
 ಮಂಡ್ಯ, ಹಾಸನ, ಮೈಸೂರು ಭಾಗಗಳಲ್ಲಿ ದಾಳಿ ನಡೆಸಿದ್ವಿ. ಕುಮಾರಸ್ವಾಮಿ, ಪರಮೇಶ್ವರ್​, ಸಿದ್ದರಾಮಯ್ಯ ಮೊದಲಾದ ನಾಯಕರು ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ ಅಂತ ದೂರು ನೀಡಿರೋ ಐಟಿ ಅಧಿಕಾರಿಗಳು ಐಪಿಸಿ ಸೆಕ್ಷನ್​​​​ 143,149, 504, 505, 506,186,187,189ರ ಅಡಿ ಕ್ರಮಕ್ಕೆ ಮನವಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES