Friday, April 19, 2024

ಕೋಲಾರ, ಚಿತ್ರದುರ್ಗ, ಕೆ.ಆರ್.ನಗರದಲ್ಲಿಂದು ರಾಹುಲ್​ ಗಾಂಧಿ ಮತಬೇಟೆ

ಬೆಂಗಳೂರು: ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಅವರು ಇಂದು ಕರುನಾಡಿನಲ್ಲಿ ಮತಬೇಟೆ ನಡೆಸಲಿದ್ದಾರೆ. ಬೆಳಗ್ಗೆ 12 ಗಂಟೆಗೆ ಕೋಲಾರಕ್ಕೆ ಆಗಮಿಸುವ ರಾಹುಲ್​ ಗಾಂಧಿ ಮೈತ್ರಿ ಅಭ್ಯರ್ಥಿ ಕೆ. ಹೆಚ್​. ಮುನಿಯಪ್ಪ ಪರ ಪ್ರಚಾರ ನಡೆಸಲಿದ್ದಾರೆ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಬೃಹತ್​ ಸಮಾವೇಶ ಆಯೋಜನೆ ಮಾಡಲಾಗಿದ್ದು, ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿ ಹಲವರು ಭಾಗಿಯಾಗಲಿದ್ದಾರೆ. ಮಧ್ಯಾಹ್ನ ಚಿತ್ರದುರ್ಗ ಹಾಗೂ ಸಂಜೆ ಕೆ.ಆರ್​. ನಗರದಲ್ಲಿ ರಾಹುಲ್​ ರ್ಯಾಲಿ ನಡೆಸಲಿದ್ದಾರೆ. ಒಕೆ.ಆರ್​. ನಗರ ಸಮಾವೇಶದಲ್ಲಿ ದೇವೇಗೌಡ್ರು, ಹೆಚ್​. ಡಿ. ಕುಮಾರಸ್ವಾಮಿ ಅವರೂ ಉಪಸ್ಥಿತರಿರಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಚಿತ್ರದುರ್ಗದಲ್ಲಿ ರಾಹುಲ್ ಗಾಂಧಿ ಕ್ಯಾಂಪೇನ್ ನಡೆಸಲಿದ್ದು, ಕೋಟೆ ನಾಡಿನಲ್ಲಿ ಕಾಂಗ್ರೆಸ್‌ ಅಧ್ಯಕ್ಷರ ಮತಬೇಟೆಗೆ ವೇದಿಕೆ ಸಜ್ಜಾಗಿದೆ. ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ದೋಸ್ತಿಗಳ ಶಕ್ತಿ ಪ್ರದರ್ಶನ ನಡೆಯಲಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಚಂದ್ರಪ್ಪ ಪರ ಮೈತ್ರಿ ನಾಯಕರು ಪ್ರಚಾರ ನಡೆಸಲಿದ್ದಾರೆ. ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​. ವಿಶ್ವನಾಥ್​, ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್, ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ ಸಚಿವ ಡಿ.ಕೆ. ಶಿವಕುಮಾರ್​ ಉಪಸ್ಥಿತರಿರಲಿದ್ದಾರೆ.

ಸಂಜೆ 5 ಗಂಟೆಗೆ ಕೆ.ಆರ್.ನಗರದಲ್ಲಿ ದೋಸ್ತಿ ಪಕ್ಷಗಳು ಶಕ್ತಿ ಪ್ರದರ್ಶಿಸಲಿದ್ದು, ಡಿಗ್ರಿ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್​ ಜೆಡಿಎಸ್​ ಸಮಾವೇಶ ನಡೆಯಲಿದೆ. ಮೈತ್ರಿ ಅಭ್ಯರ್ಥಿ ನಿಖಿಲ್​ ಪರ ರಾಹುಲ್​​​ ಗಾಂಧಿ ಪ್ರಚಾರ ಮಾಡಲಿದ್ದಾರೆ. ಸಮಾವೇಶದಲ್ಲಿ ಹೆಚ್.​​ಡಿ.ದೇವೇಗೌಡ, ಸಿಎಂ ಹೆಚ್.​ಡಿ. ಕುಮಾರಸ್ವಾಮಿ ಅವರೂ ಭಾಗಿಯಾಗಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿರಲಿದ್ದಾರೆ.

RELATED ARTICLES

Related Articles

TRENDING ARTICLES