Wednesday, April 24, 2024

‘ದೇಶಕ್ಕಾಗಿ ಬಿಜೆಪಿಯ ಒಂದು ನಾಯಿಯೂ ಸತ್ತಿಲ್ಲ’ : ಮಲ್ಲಿಕಾರ್ಜುನ ಖರ್ಗೆ

ಯಾದಗಿರಿ : ದೇಶಕ್ಕಾಗಿ ಬಿಜೆಪಿಯ ಒಂದು ನಾಯಿಯೂ ಸತ್ತಿಲ್ಲ ಅಂತ ಕಾಂಗ್ರೆಸ್​ನ ಹಿರಿಯ ನಾಯಕ, ರಾಜಕೀಯ ಮುತ್ಸದ್ಧಿ, ಸಂಸದ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಯಾದಗಿರಿಯ ಕೊಂಕಲ್​​ನಲ್ಲಿ ಭಾಷಣದ ಅಬ್ಬರದ ನಡುವೆ ಖರ್ಗೆಯವರು ಮನಸೋ ಇಚ್ಛೆ ಮಾತನಾಡಿದ್ದಾರೆ. ”ದೇಶದ ಸ್ವಾತಂತ್ರ್ಯದ ಬಗ್ಗೆ ಮೋದಿಗಿಂತ ಹೆಚ್ಚು ನನಗೆ ಗೊತ್ತು. ವಯಸ್ಸಿನಲ್ಲಿ ನನಗಿಂತ ಮೋದಿ ಚಿಕ್ಕವನು. ಸ್ವಾತಂತ್ರ್ಯ ಬಂದಾಗ ಮೋದಿ ಹುಟ್ಟಿರಲಿಲ್ಲ, ನಾನು ಹುಟ್ಟಿದ್ದೆ..! ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರೇ ಕಾಂಗ್ರೆಸ್​ನವರು. ಆದರೆ, ದೇಶಕ್ಕಾಗಿ ಬಿಜೆಪಿಯ ಒಂದು ನಾಯಿಯೂ ಸತ್ತಿಲ್ಲ. ಇಂಥವರು ನಮಗೆ ದೇಶಭಕ್ತಿಯ ಪಾಠ ಮಾಡುತ್ತಾರೆ” ಎಂದು ಮಲ್ಲಿಕಾರ್ಜುನ ಖರ್ಗೆ ಅವರು ನಾಲಗೆ ಹರಿಬಿಟ್ಟಿದ್ದಾರೆ.

RELATED ARTICLES

Related Articles

TRENDING ARTICLES