ದಾವಣಗೆರೆ : ಮಹಾ ಘಟಬಂಧನ್ ಅಧಿಕಾರಕ್ಕೆ ಬಂದ್ರೆ ದಿನಕ್ಕೊಬ್ಬರು ಪ್ರಧಾನಿಯಾಗುತ್ತಾರೆ ಅಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವ್ಯಂಗ್ಯವಾಡಿದ್ದಾರೆ.
ಹೊನ್ನಾಳಿಯಲ್ಲಿ ಮಾತನಾಡಿದ ಅವರು, ”ನಾನು ದೇಶದ 244 ಕಡೆ ಪ್ರವಾಸ ಮಾಡಿದ್ದೇನೆ. ಎಲ್ಲಿ ನೋಡಿದರೂ ಮೋದಿ ಮೋದಿ ಅನ್ನೋ ಘೋಷಣೆ ಮೊಳಗುತ್ತಿದೆ. ಮಹಾ ಘಟಬಂಧನ್ ಅಧಿಕಾರಕ್ಕೆ ಬಂದರೆ ದಿನಕ್ಕೆ ಒಬ್ಬರು ಪ್ರಧಾನಿ ಆಗುತ್ತಾರೆ. ಸೋಮವಾರ ಮಾಯಾವತಿ, ಮಂಗಳವಾರ ಅಖಿಲೇಶ್, ಬುಧವಾರ ದೇವೇಗೌಡ್ರು, ಗುರುವಾರ ಚಂದ್ರಬಾಬು ನಾಯ್ಡು ಪ್ರಧಾನಿಯಾಗ್ತಾರೆ” ಅಂತ ಲೇವಡಿ ಮಾಡಿದರು.
ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧವೂ ಹರಿಹಾಯ್ದ ಅಮಿತ್ ಶಾ, ‘ರಾಜ್ಯದ ಜನ ನನ್ನ ಸಿಎಂ ಮಾಡಿಲ್ಲ. ಸಿಎಂ ಮಾಡಿದ್ದು ಸೋನಿಯಾ ಗಾಂಧಿ ಅಂತ ಕುಮಾರಸ್ವಾಮಿ ಹೇಳುತ್ತಾರೆ. ಅವರಿಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದರು.
ಹರಿಹರದಲ್ಲಿ 275 ಎಕರೆಯಲ್ಲಿ ಗೊಬ್ಬರ ತಯಾರಿಕಾ ಕಾರ್ಖಾನೆ ನಿರ್ಮಾಣ ಮಾಡುತ್ತೇವೆ . ಯುಪಿಎ ಅವಧಿಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. 10 ವರ್ಷ ಅವಧಿಯಲ್ಲಿ ಯುಪಿಎ ಏನೂ ಮಾಡಿಲ್ಲ. ಮೋದಿ ಸರ್ಕಾರದಲ್ಲಿ ಹೆಚ್ಚಿನ ಅನುದಾನ ನೀಡಿದ್ದೇವೆ.ಸಿಎಂ ಆದಾಕ್ಷಣ ರೈತರ ಸಂಪೂರ್ಣ ಸಾಲಮನ್ನಾ ಮಾಡುತ್ತೇನೆ ಎಂದಿದ್ದರು. ಆದರೆ, ಅವರು ಹೇಳಿದಂತೆ ನಡೆದುಕೊಂಡಿಲ್ಲ. ಕಾಂಗ್ರೆಸ್ನವರಿಗೆ ಕರ್ನಾಟಕದ ಅಭಿವೃದ್ಧಿ ಬೇಕಾಗಿಲ್ಲ. ಎಟಿಎಂ ರೀತಿಯಲ್ಲಿ ಹಣ ಪಡೆಯಲು ನೋಡುತ್ತಿದೆ ಎಂದು ಟೀಕಿಸಿದರು.
ಕೇಂದ್ರದಿಂದ ಬಡವರಿಗೆ ಎಲ್ಪಿಜಿಯನ್ನು ಒದಗಿಸಲಾಗಿದೆ. ಬಡವರಿಗೆ ಮನೆಯನ್ನೂ ನೀಡುವ ಕೆಲಸ ಮಾಡಿದೆ. ಮೋದಿ ಸರ್ಕಾರದಿಂದ ಶೌಚಗೃಹ ನಿರ್ಮಾಣ ಕಾರ್ಯವಾಗಿದೆ. ರಾಜ್ಯದಲ್ಲಿ ಕಡಿಮೆ ಸ್ಥಾನ ಬಂದವರನ್ನು ಸಿಎಂ ಮಾಡಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯುವ ತಂತ್ರ ಇದಾಗಿದೆ. ನನ್ನನ್ನು ಕರ್ನಾಟಕದ ಜನ ಸಿಎಂ ಮಾಡಿಲ್ಲ. ಹೆಚ್ಡಿಕೆ ಸೋನಿಯಾ, ರಾಹುಲ್ ಕೃಪೆಯಿಂದ ಸಿಎಂ ಆಗಿದ್ದೇನೆ ಅಂತಿದ್ದಾರೆ. ಬಡವರಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಕಾರ್ಯವನ್ನು ನಮ್ಮ ಸರ್ಕಾರ ಕೈಗೊಂಡಿದೆ. ಶಿವಮೊಗ್ಗ, ಶಿಕಾರಿಪುರ ಹಾಗೂ ಹರಿಹರ ರೈಲ್ವೆ ಮಾರ್ಗ ಸರ್ವೆ ಕಾರ್ಯ ಮುಗಿದಿದೆ. ಶೀಘ್ರವೇ ರೈಲ್ವೆ ಮಾರ್ಗ ಕಾಮಗಾರಿ ಆರಂಭವಾಗಲಿದೆ. ದಾವಣಗೆರೆಯಲ್ಲಿ ಪಾಸ್ಪೋರ್ಟ್ ಹಾಗೂ ವೀಸಾ ಕೇಂದ್ರ ಸ್ಥಾಪನೆಯಾಗಿವೆ. ದಾವಣಗೆಯನ್ನು ಸ್ಮಾರ್ಟ್ಸಿಟಿ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ. ಹೊಸ ರಸ್ತೆಗಳ ನಿರ್ಮಾಣ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
ಮಹಾ ಘಟಬಂಧನ್ ಅಧಿಕಾರಕ್ಕೆ ಬಂದ್ರೆ ದಿನಕ್ಕೊಬ್ಬರು ಪ್ರಧಾನಿ : ಅಮಿತ್ ಶಾ
RELATED ARTICLES
Recent Comments
on ಕ್ಷಮಿಸಿ ಪಾಕ್ ಅಭಿಮಾನಿಗಳೇ, 10 ನಿಮಿಷದಲ್ಲಿ ಟಿವಿ ಡೆಲಿವರಿ ಮಾಡೋಕೇ ಆಗಲ್ಲ: ಪಾಕ್ನ ಟ್ರೋಲ್ ಮಾಡಿದ ಬ್ಲಿಂಕ್ಇಟ್
on ಗ್ರಾಮಿಣ ಬಾಗದ ಕಾಲೇಜನ್ನು ಬೆಳಗಾವಿಗೆ ಸ್ಥಳಾಂತರ ವಿರುದ್ದ ಸತ್ಯಾಗ್ರಹ ಮಾಡುತ್ತೆನೆ ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


