Saturday, October 26, 2024

ಮೇ 23ರ ನಂತ್ರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ : ಈಶ್ವರಪ್ಪ

ಬಾಗಲಕೋಟೆ : ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲೂ ಭಾರಿ ಬದಲಾವಣೆ ಆಗುತ್ತೆ ಅನ್ನೋ ಚರ್ಚೆ ಬಲವಾಗಿ ಕೇಳಿಬರುತ್ತಿದೆ. ಅದಕ್ಕೆ ತಕ್ಕಂತೆ ಮೈತ್ರಿ ನಾಯಕರ ಮುನಿಸು ಕೂಡ ತಾರಕಕ್ಕೆ ಏರಿದ್ದು, ಪರಸ್ಪರ ಬಿರುಸಿನ ವಾಕ್ಸಮರ ನಡೆಸುತ್ತಿದ್ದಾರೆ. ಈ ನಡುವೆ ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚಿಸಲು ಉತ್ಸುಕರಾಗಿದ್ದಾರೆ.
ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಇಂದು ಈ ಬಗ್ಗೆ ಮತ್ತೆ ಮಾತಾಡಿದ್ದಾರೆ. ಮೇ.23ರ ನಂತ್ರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಅಂತ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ನಮ್ಮ ಸಂಖ್ಯಾಬಲ 104 ಇದೆ. 106 ಆಗುತ್ತೆ. ಕಾಂಗ್ರೆಸ್​, ಜೆಡಿಎಸ್​ ಅತೃಪ್ತರು ಬಿಜೆಪಿಗೆ ಬರ್ತಿದ್ದಾರೆ. ರಮೇಶ್ ಜಾರಕಿಹೊಳಿ ಸೇರಿದಂತೆ ಅನೇಕರು ಬಿಜೆಪಿ ಸೇರಲಿದ್ದಾರೆ. ಮೇ.23ರ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುತ್ತೆ ಅಂದರು.

RELATED ARTICLES

Related Articles

TRENDING ARTICLES