Monday, February 24, 2025

ಗುರುವಾಯೂರಿನಲ್ಲಿ ತಾವರೆಗಳಿಂದ ಮೋದಿ ತುಲಾಭಾರ

ತಿರುವನಂತಪುರ: ಪ್ರಧಾನಿ ನರೇಂದ್ರ ಮೋದಿ ಅವರು ಕೇರಳದ ಐತಿಹಾಸಿಕ ಶ್ರೀಕೃಷ್ಣ ದೇವಾಲಯ ಗುರುವಾಯೂರಿಗೆ ಭೇಟಿ ನೀಡಿದ್ದಾರೆ. ಗುರುವಾಯೂರು ಶ್ರೀಕೃಷ್ಣನ ದರ್ಶನ ಪಡೆದ ಪ್ರಧಾನಿ ತುಲಾಭಾರ ಸೇವೆಯನ್ನೂ ನಡೆಸಿದ್ದಾರೆ. ಬಿಜೆಪಿ ಚಿಹ್ನೆಯಾಗಿರುವ ತಾವರೆ ಹೂಗಳಿಂದ ತುಲಾಭಾರ ನಡೆಸಲಾಗಿದೆ. ದರ್ಶನದ ಬಳಿಕ ದೇಶದ ಅಭಿವೃದ್ಧಿಗಾಗಿ ಪ್ರಾರ್ಥಿಸಿರುವುದಾಗಿ ಮೋದಿ ಟ್ವೀಟ್​ ಮಾಡಿದ್ದಾರೆ.

ಇಂದಿನಿಂದ ಪ್ರಧಾನಿ ಮೋದಿ ಪ್ರವಾಸ ಕೈಗೊಂಡಿದ್ದು, ಮಾಲ್ಡೀವ್ಸ್​​​ ಸಂಸತ್​​​​ನಲ್ಲಿ ಭಾಷಣ ಮಾಡಲಿದ್ದಾರೆ. ಜೂನ್​ 9ಕ್ಕೆ ಶ್ರೀಲಂಕಾಗೆ ಪ್ರಯಾಣ ಬೆಳೆಸಲಿದ್ದಾರೆ.

RELATED ARTICLES

Related Articles

TRENDING ARTICLES