ಬೆಂಗಳೂರು : ಕಾಂಗ್ರೆಸ್ ಅತೃಪ್ತರು ತಣ್ಣಗಾಗುವಷ್ಟರಲ್ಲೇ ದೇವೇಗೌಡರು ‘ಮೈತ್ರಿ’ ಬಗ್ಗೆ ಬಾಂಬ್ ಸಿಡಿಸಿದ್ದಾರೆ. ಮಾಜಿ ಪ್ರಧಾನಿಗಳ ಮಾತಿಗೆ ದೋಸ್ತಿ ಮುಖಂಡರು ಶೇಕ್ ಆಗಿದ್ದಾರೆ..!
ಬೆಂಗಳೂರಲ್ಲಿ ಮಾತನಾಡಿರೋ ಹೆಚ್ಡಿಡಿ, ” ರಾಜ್ಯದಲ್ಲಿ ದೋಸ್ತಿ ಸರ್ಕಾರ ಎಷ್ಟು ದಿನಗಳ ಕಾಲ ಇರುತ್ತೋ ಗೊತ್ತಿಲ್ಲ. ಮಧ್ಯಂತರ ಚುನಾವಣೆ ಬಗ್ಗೆ ಯಾವುದೇ ಸಂಶಯವೇ ಬೇಡ. ಎಲ್ಲವೂ ಕಾಂಗ್ರೆಸ್ ಮುಖಂಡರ ಕೈಯಲ್ಲೇ ಇದೆ” ಅಂದಿದ್ದಾರೆ.
ಲೋಕ ಸಮರದ ನಂತ್ರ ಕಾಂಗ್ರೆಸ್ ಹೈಕಮಾಂಡ್ ಕೊಂಚ ಶಕ್ತಿ ಕಳೆದುಕೊಂಡಿದೆ. ಜೆಡಿಎಸ್ ಜೊತೆ ಹೊರಟ್ರೆ ಕಾಂಗ್ರೆಸ್ ಪಕ್ಷ ಕುಂದುತ್ತೆ ಅನ್ನೋ ಸಂಕಟ ಇದೆ. ಹಾಗಾಗಿಯೇ ಜೆಡಿಎಸ್ ಪಾಲಿನ ಒಂದು ಮಂತ್ರಿ ಸ್ಥಾನವನ್ನೂ ತೆಗೆದುಕೊಂಡಿದ್ದಾರೆ . ಎಲ್ಲಾ ಸಹಿಸ್ಕೊಂಡು ಹೋಗ್ತಿದ್ದೇನೆ. ಲೋಕ ಸಮರದ ಸೋಲಿಗೆ ನಾವು ಕಾರಣವಾದ್ರೆ ಬಹಿರಂಗವಾಗಿ ಹೇಳಲಿ ಅಂತ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ತುಮಕೂರು ಸೋಲಿನ ಬಗ್ಗೆಯೂ ಕಾಂಗ್ರೆಸ್ಗೆ ತಿರುಗೇಟು ನೀಡಿದ ದೇವೇಗೌಡ್ರು, ”ಕಾಂಗ್ರೆಸ್ ಹಾಲಿ ಸಂಸದರ ಕ್ಷೇತ್ರವನ್ನು ಬೇಡ ಎಂದು ನಾನು ಹೇಳಿದ್ದೆ. ಮೈಸೂರು ಉಳಿಸಿಕೊಳ್ಳಲು ತುಮಕೂರು ಕ್ಷೇತ್ರವನ್ನು ನಮಗೆ ಬಿಟ್ಟುಕೊಟ್ರು. ಮೈತ್ರಿ ಸರ್ಕಾರ ಮಾಡ್ಲೇಬೇಕು ಅಂತ ನನಗೇನೂ ಇರಲಿಲ್ಲ. ಯಡಿಯೂರಪ್ಪ ಸಿಎಂ ಆಗಬಾರ್ದು ಅಂತಾ ಕಾಂಗ್ರೆಸ್ನವರು ಓಡೋಡಿ ಬಂದ್ರು. ಎಲ್ಲ ಸಾಧಕ ಬಾಧಕ ಚರ್ಚೆ ಮಾಡದೇ ಕಾಂಗ್ರೆಸ್ ಮುಖಂಡರು ಸರ್ಕಾರ ರಚಿಸಿದ್ರು” ಅಂತ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧ ಗುಡುಗಿದ್ದಾರೆ.
ಕುಮಾರಸ್ವಾಮಿ ಅವರನ್ನೇ ಸಿಎಂ ಮಾಡಿ ಎಂದು ಕಾಂಗ್ರೆಸ್ನವರು ಒತ್ತಾಯಿಸಿದ್ರು. ಕಾಂಗ್ರೆಸ್ ಪಕ್ಷಕ್ಕೆ ಸರ್ಕಾರ ಮುನ್ನಡೆಸುವ ಮನಸ್ಸು ಇದೆಯೋ ಇಲ್ವೋ ಗೊತ್ತಿಲ್ಲ ಅಂತ ಅಸಮಧಾನ ಹೊರ ಹಾಕಿದ್ರು.
‘ಮೈತ್ರಿ’ ಬಗ್ಗೆ ದೇವೇಗೌಡ್ರೇ ಸಿಡಿಸಿದ್ರು ಬಾಂಬ್..! ಹೆಚ್ಡಿಡಿ ಮಾತಿಗೆ ‘ದೋಸ್ತಿ’ ಶೇಕ್..!
RELATED ARTICLES
Recent Comments
on ಕ್ಷಮಿಸಿ ಪಾಕ್ ಅಭಿಮಾನಿಗಳೇ, 10 ನಿಮಿಷದಲ್ಲಿ ಟಿವಿ ಡೆಲಿವರಿ ಮಾಡೋಕೇ ಆಗಲ್ಲ: ಪಾಕ್ನ ಟ್ರೋಲ್ ಮಾಡಿದ ಬ್ಲಿಂಕ್ಇಟ್
on ಗ್ರಾಮಿಣ ಬಾಗದ ಕಾಲೇಜನ್ನು ಬೆಳಗಾವಿಗೆ ಸ್ಥಳಾಂತರ ವಿರುದ್ದ ಸತ್ಯಾಗ್ರಹ ಮಾಡುತ್ತೆನೆ ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


