ಬೆಂಗಳೂರು: ದೋಸ್ತಿ ಸರ್ಕಾರದ ಮತ್ತೆ ಮೂರು ಶಾಸಕರು ರಾಜೀನಾಮೆ ನೀಡಿದ್ದಾರೆ. ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್, ಚಿಕ್ಕಬಳ್ಳಾಪುರ ಶಾಸಕ ಡಾ.ಕೆ ಸುಧಾಕರ್, ಖಾನಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಸ್ಪೀಕರ್ ಗೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಇದೀಗ ಒಟ್ಟು 17 ಜನ ಶಾಸಕರು ರಾಜೀನಾಮೆ ನೀಡಿದಂತಾಗಿದೆ. 224 ಸದಸ್ಯರ ರಾಜ್ಯ ವಿಧಾನಸಭೆಯ ಸಂಖ್ಯಾಬಲ ಇದೀಗ 207ಕ್ಕೆ ಕುಸಿದಿದೆ.