Sunday, October 27, 2024

ವಿಶ್ವಾಸ ಮತಯಾಚನೆಗೆ ಸಿಎಂ ನಿರ್ಧಾರ..!

ಬೆಂಗಳೂರು : ಅತೃಪ್ತರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ರಾಜೀನಾಮೆ ಅಂಗೀಕರಿಸುವಂತಿಲ್ಲ, ಅನರ್ಹಗೊಳಿಸುವಂತೆಯೂ ಇಲ್ಲ. ಮಂಗಳವಾರದವರೆಗೆ ಯಥಾಸ್ಥಿತಿಯಲ್ಲೇ ಇರುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಆದೇಶದ ಬೆನ್ನಲ್ಲೇ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆಗೆ ನಿರ್ಧರಿಸಿದ್ದು, ತಾನು ವಿಶ್ವಾಸ ಮತಯಾಚನೆ ಮಾಡುವುದಾಗಿ ಘೋಷಿಸಿ ಸಮಯಾವಕಾಶ ಕೇಳಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸದನದ ಬೆಂಬಲವಿದ್ದಾಗ ಮಾತ್ರ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲು ಸಾಧ್ಯ. ಆದ್ದರಿಂದ ವಿಶ್ವಾಸಮತ ಯಾಚನೆ ಮಾಡುತ್ತೇನೆ. ಸಮಯ ನಿಗದಿಪಡಿಸಿ ಅಂತ ಸ್ಪೀಕರ್ ರಮೇಶ್​​ ಕುಮಾರಲ್ಲಿ ಮನವಿ ಮಾಡಿದರು.

RELATED ARTICLES

Related Articles

TRENDING ARTICLES