ಬೆಂಗಳೂರು : ಮೂವರು ಅತೃಪ್ತ ಶಾಸಕರಿಗೆ ಅನರ್ಹತೆ ಶಿಕ್ಷೆ ವಿಧಿಸಿ ಸ್ಪೀಕರ್ ರಮೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನ ಶಕ್ತಿಸೌಧ ವಿಧಾನಸೌಧದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು, ಗೋಕಾಕ್ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಕಾಂಗ್ರೆಸ್ ಶಾಸಕ ಮಹೇಶ್ ಕುಮಟಳ್ಳಿ, ರಾಣೆಬೆನ್ನೂರು ಶಾಸಕ (ಕೆಪಿಜೆಪಿ) ಆರ್, ಶಂಕರ್ ಅವರನ್ನು ಅನರ್ಹಗೊಳಿಸುವುದಾಗಿ ತಿಳಿಸಿದರು.
ದೋಸ್ತಿ ಸರ್ಕಾರದ ವಿರುದ್ಧ ಬಂಡಾಯದ ಕಹಳೆ ಊದಿದ್ದ ರಮೇಶ್ ಜಾರಕಿಹೊಳಿ, ಮಹೇಶ ಕುಮಟಳ್ಳಿ ಮತ್ತು ಆರ್.ಶಂಕರ್ ಅನರ್ಹಗೊಂಡಿದ್ದು, ಉಳಿದ ಅತೃಪ್ತರ ರಾಜೀನಾಮೆ ಕುರಿತ ತೀರ್ಪನ್ನು ಸ್ಪೀಕರ್ ಕಾಯ್ದಿರಿಸಿದ್ದಾರೆ. ಈ ವಿಧಾನಸಭೆಯ ಅವಧಿ ಮುಗಿಯುವರೆಗೂ ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಅಂತ ರಮೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಮೂವರು ಅತೃಪ್ತರಿಗೆ ಅನರ್ಹತೆ ಶಿಕ್ಷೆ..!
TRENDING ARTICLES