Monday, October 28, 2024

‘ಮಹಾ’ ತೀರ್ಪು : ನಾಳೆ ಸಂಜೆ 5ರೊಳಗೆ ಬಹುಮತ ಸಾಬೀತಿಗೆ ‘ಸುಪ್ರೀಂ’ ಆದೇಶ

ನವದೆಹಲಿ : ಮಹಾರಾಷ್ಟ್ರ ಸರ್ಕಾರ ರಚನೆ ಬಿಕ್ಕಟ್ಟು ಕೈಮ್ಯಾಕ್ಸ್ ತಲುಪಿದ್ದು, ಸರ್ಕಾರ ರಚನೆ ವಿರೋಧಿಸಿ ಎನ್​ಸಿಪಿ – ಶಿವಸೇನೆ – ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಕೋರ್ಟ್ ಮಹತ್ತರ ತೀರ್ಪು ನೀಡಿದೆ. ಬುಧವಾರ ಸಂಜೆ 5ಗಂಟೆಯೊಳಗೆ ‘ನೇರ ಪ್ರಸಾರದೊಂದಿಗೆ’ ಬಹುಮತ ಸಾಬೀತು ಪಡಿಸುವಂತೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್​ಗೆ ‘ಸುಪ್ರೀಂ’ ಆದೇಶಿಸಿದೆ.
ಶಾಸಕರೆಲ್ಲಾ ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ಹಂಗಾಮಿ ಸ್ಪೀಕರ್ ನೇತೃತ್ವದಲ್ಲಿ ವಿಶ್ವಾಸ ಮತ ಪ್ರಕ್ರಿಯೆ ನಡೆಯಬೇಕು. ಗೌಪ್ಯ ಮತದಾನ ನಡೆಸದೆ ನೇರ ಪ್ರಸಾರದ ಮೂಲಕ ಮತದಾನ ಪ್ರಕ್ರಿಯೆ ನಡೆಸುವಂತೆ ಸುಪ್ರೀಂ ಸೂಚಿಸಿದ್ದು, ದೇವೇಂದ್ರ ಫಡ್ನವಿಸ್​ಗೆ ಅಗ್ನಿಪರೀಕ್ಷೆ ಎದುರಾಗಿದೆ.
ಕಳೆದ 23ರಂದು ಬಿಜೆಪಿಯ ದೇವೇಂದ್ರ ಫಡ್ನವಿಸ್ ಮತ್ತು ಎನ್​ಸಿಪಿಯ ಅಜಿತ್ ಪವಾರ್ ಕ್ರಮವಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ರು. ಈ ಮಿಂಚಿನ ಮೈತ್ರಿಗೆ ಅವಕಾಶ ಮಾಡಿಕೊಟ್ಟ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಕ್ರಮ ಪ್ರಶ್ನಿಸಿ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದವು.
24 ಮತ್ತು 25ರಂದು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ನ್ಯಾ. ಎನ್ ವಿ ರಮಣ, ನ್ಯಾ. ಅಶೋಕ್ ಭೂಷಣ್ ಮತ್ತು ನ್ಯಾ. ಸಂಜೀವ್ ಖನ್ನಾ ನೇತೃತ್ವದ ತ್ರಿಸದಸ್ಯ ಪೀಠ ಇಂದು ತೀರ್ಪನ್ನು ಪ್ರಕಟಿಸಿದೆ.

RELATED ARTICLES

Related Articles

TRENDING ARTICLES