ಪ್ರಧಾನಮಂತ್ರಿ ನರೇಂದ್ರ ಮೋದಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಇಂದು ಬೆಳಗ್ಗೆ ಕರೆ ಮಾಡಿದ್ದಾರೆ. ಬೆಳ್ಳಂಬೆಳಗ್ಗೆ ಸಿಎಂಗೆ ಕರೆ ಮಾಡಿದ ಪಿಎಂ ಉಪ ಚುನಾವಣೆ ಗೆಲುವಿಗೆ ಮತ್ತೊಮ್ಮೆ ಅಭಿನಂದನೆ ತಿಳಿಸಿದ್ದಾರೆ. ದೂರವಾಣಿ ಮೂಲಕ ಮಾತುಕತೆ ನಡೆಸಿದ ಮೋದಿ, ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಹಕಾರ ಕೊಡುವುದಾಗಿ ಭರವಸೆ ಯಡಿಯೂರಪ್ಪ ಅವರಿಗೆ ಭರವಸೆ ನೀಡಿದ್ರು. ರಾಜ್ಯಕ್ಕೆ ಬರಬೇಕಾದ GST ತೆರಿಗೆಯ ಪಾಲು ಕೊಡುವ ಬಗ್ಗೆಯೂ ಮಾತುಕತೆ ನಡೆಸಿದ ಪಿಎಂ, ಆದಷ್ಟು ಬೇಗ ರಾಜ್ಯದ GST ಪಾಲು ಕೊಡುವುದಾಗಿ ತಿಳಿಸಿದ್ದಾರೆ. ಅಲ್ಲದೆ ರಾಜ್ಯದ ತೆರಿಗೆ ಸಂಗ್ರಹ ಹಾಗೂ ಅಭಿವೃದ್ಧಿ ಕುರಿತು ಸಿಎಂರಿಂದ ಮಾಹಿತಿ ಪಡೆದ ಪ್ರಧಾನಿ