ಬೆಂಗಳೂರು: ಕೆಪಿಸಿಸಿ ಸಾರಥಿಯಾಗಿ ಡಿ.ಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಲೋಕಸಭಾ ಚುನಾವಣಾ ಹೀನಾಯ ಸೋಲಿನ ಬಳಿಕ ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ ಶಿವಕುಮಾರ್ ನೇಮಕವಾಗಿದ್ದಾರೆ. ಅದೇ ರೀತಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸಲೀಂ ಅಹ್ಮದ್, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ನೇಮಕಗೊಂಡಿದ್ದಾರೆ. ಸಿದ್ದರಾಮಯ್ಯ ವಿಪಕ್ಷ ನಾಯಕ ಹಾಗೂ ಸಿಎಲ್ಪಿ ನಾಯಕರಾಗಿ ಮುಂದುವರೆಯಲಿದ್ದಾರೆ.