Friday, April 26, 2024

ಮಧ್ಯಪ್ರದೇಶ ಸರ್ಕಾರ ಉಳಿಸಿಕೊಳ್ಳುತ್ತಾ ಕಾಂಗ್ರೆಸ್​ ?

ಭೋಪಾಲ್​ : ಕಮಲ್​ನಾಥ್​ ಸಾರಥ್ಯದ ಮಧ್ಯಪ್ರದೇಶ ಕಾಂಗ್ರೆಸ್​ ಸರ್ಕಾರಕ್ಕೆ ಮಧ್ಯಪ್ರದೇಶದ ರಾಜ್ಯಪಾಲ ಸಡನ್​ ಶಾಕ್​ ಕೊಟ್ಟಿದ್ದಾರೆ. ಸಿಎಂ ಕಮಲ್​ನಾಥ್​ಗೆ ಪತ್ರದ ಮೂಲಕ ತಾಕೀತು ಮಾಡಿರುವ ಅವರು ನಾಳೆಯೇ ವಿಶ್ವಾಸಮತ ಸಾಬೀತು ಮಾಡುವಂತೆ ಹೇಳಿದ್ದಾರೆ.  ನಾಳೆ ನೀವು ವಿಶ್ವಾಸಮತ ಸಾಬೀತುಪಡಿಸಲು ವಿಫಲವಾದ್ರೆ ನಿಮ್ಮ ಸರ್ಕಾರಕ್ಕೆ ವಿಧಾನಸಭೆಯಲ್ಲಿ ಬಹುಮತವಿಲ್ಲ ಎಂದು ಪರಿಗಣಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

 ಸೋಮವಾರ ಬಜೆಟ್​ ಅಧಿವೇಶನ ಆರಂಭವಾದ ಬೆನ್ನಲ್ಲೇ ರಾಜ್ಯಪಾಲರ ಭಾಷಣದ ಬಳಿಕ ಅಧಿವೇಶನವನ್ನು ಮಾರ್ಚ್ 26ಕ್ಕೆ ಮುಂದೂಡಲಾಯ್ತು.  ಅಧಿವೇಶನವನ್ನು 10 ದಿನಗಳ ಕಾಲ ಮುಂದೂಡಿ ತನ್ನ ಶಾಸಕರನ್ನು ಒಗ್ಗೂಡಿಸುವ ತಂತ್ರಕ್ಕೆ ಕಾಂಗ್ರೆಸ್ ಶರಣಾಯಿತು. ಆದರೆ ಇದನ್ನು ವಿರೋಧಿಸಿದ ಬಿಜೆಪಿ ಸುಪ್ರೀಂ ಕೋರ್ಟ್​ ಮೊರೆ ಹೋಗುವ ಜೊತೆಯಲ್ಲೇ ರಾಜ್ಯಪಾಲರನ್ನು ಭೇಟಿಯಾಯಿತು.

   ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಚೌಹಾಣ್​ ಮನವಿ ಮೇರೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಜ್ಯಪಾಲರು, ನಾಳೆಯೇ ವಿಶ್ವಾಸಮತ ಸಾಬೀತುಪಡಿಸುವಂತೆ  ಆಡಳಿತರೂಡ ಕಾಂಗ್ರೆಸ್​ ಪಕ್ಷಕ್ಕೆ ಸೂಚನೆ ನೀಡಿದ್ದಾರೆ. ಕಾಂಗ್ರೆಸ್​ನಿಂದ ಬಂಡಾಯವೆದ್ದು ಬಿಜೆಪಿ ಸೇರಿರುವ ಜ್ಯೋತಿರಾದಿತ್ಯ ಸಿಂಧಿಯಾ, ತನ್ನ ಜೊತೆಗೆ 19 ಶಾಸಕರನ್ನು ಸೆಳೆದುಕೊಂಡಿರುವುದರಿಂದ ಹಾಗೂ ಶಾಸಕರು ರಾಜಿನಾಮೆ ನೀಡಿರುವುದರಿಂದ ಅಲ್ಪಮತಕ್ಕೆ ಕುಸಿದಿದೆ  ಹೀಗಾಗಿ ನಾಳಿನ  ವಿಶ್ವಾಸಮತ ಯಾಚನೆ ವೇಳೆಗೆ ಕಾಮಗ್ರೆಸ್​ ಸರ್ಕಾರ ಪತನವಾಗುವುದು ಬಹುತೇಕ ಖಚಿತವಾಗಿದೆ.

RELATED ARTICLES

Related Articles

TRENDING ARTICLES