ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಇಂದು ಪ್ರತಿಜ್ಞೆ ಮಾಡಲಿದ್ದಾರೆ. ಡಿಕೆಶಿ ಪದಗ್ರಹಣಕ್ಕೆ ಎರಡು ಬಾರಿ ಡೇಟ್ ಫಿಕ್ಸ್ ಆಗಿ ಕ್ಯಾನ್ಸಲ್ ಆಗಿತ್ತು. ಇಂದು ಅಂತಿಮವಾಗಿ ಕೆಪಿಸಿಸಿ ಕಚೇರಿಯಲ್ಲಿ 11 ಗಂಟೆಗೆ ಪ್ರತಿಜ್ನಾವಿಧಿ ವಿಧಿ ಸ್ವೀಕರಿಸಲಿದ್ಧಾರೆ.
ಇನ್ನು ಕಾರ್ಯಕ್ರಮದ ವೀಕ್ಷಣೆಗಾಗಿ ಝೂಮ್ ಆ್ಯಪ್ ಮೂಲಕ ಅವಕಾಶ ಕಲ್ಪಿಸಲಾಗಿದ್ದು 15 ಲಕ್ಷಕ್ಕೂ ಹೆಚ್ಚು ಜನ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಡಿಕೆಶಿ ಜೊತೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹಮದ್ ಇಂದು ಅಧಿಕಾರ ಸ್ವೀಕರಿಸಲಿದ್ದಾರೆ….ಪದಗ್ರಹಣ ಕಾರ್ಯಕ್ರಮಕ್ಕೆ ಡಿ.ಕೆ. ಶಿವಕುಮಾರ್ ತಾಯಿ ಗೌರಮ್ಮ, ರಾಜಗುರು ದ್ವಾರಕನಾಥ್ , ಕಾಂಗ್ರೆಸ್ನ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ರೆಹಮಾನ್ ಖಾನ್ ಸೇರಿದಂತೆ ಕೆಲ ನಾಯಕರು ಭಾಗಿಯಾಗಿದ್ದಾರೆ.