ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಕರ್ನಾಟಕ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿಯಾಗಿದ್ದ ವಿಜಯೇಂದ್ರ ಪಕ್ಷದಲ್ಲಿ ಬಡ್ತಿ ಪಡೆದಿದ್ದಾರೆ.
ವಿಜಯೇಂದ್ರ ಅವರಲ್ಲದೆ ಶೋಭಾ ಕರಂದ್ಲಾಜೆ, ಅರವಿಂದ ಲಿಂಬಾವಳಿ, ತೇಜಸ್ವಿನಿ ಅನಂತ್ ಕುಮಾರ್ನಿರ್ಮಲ್ ಕುಮಾರ್ ಸುರಾನಾ, ಮಾಲೀಕಯ್ಯ ಗುತ್ತೇದಾರ್, ಪ್ರತಾಪ್ ಸಿಂಹ, ಎಂ.ಬಿ. ನಂದೀಶ್, ಎಂ ಶಂಕ್ರಪ್ಪ, ಎಂ ರಾಜೇಂದ್ರ ಕೂಡ ಉಪಾಧ್ಯಕ್ಷರಾಗಿ ನೇಮಕವಾಗಿದ್ದಾರೆ.
ರಾಜ್ಯ ಬಿಜೆಪಿ ನೂತನ ಪದಾಧಿಕಾರಿಗಳ ಪಟ್ಟಿ
ರಾಜ್ಯ ಉಪಾಧ್ಯಕ್ಷರು: ಬಿ.ವೈ. ವಿಜಯೇಂದ್ರ, ಅರವಿಂದ ಲಿಂಬಾವಳಿ, ನಿರ್ಮಲ್ ಕುಮಾರ್ ಸುರಾನ, ಶೋಭಾ ಕರಂದ್ಲಾಜೆ, ಮಾಲೀಕಯ್ಯ ಗುತ್ತೇದಾರ್, ತೇಜಸ್ವಿನಿ ಅನಂತ ಕುಮಾರ್, ಪ್ರತಾಪಸಿಂಹ, ಎಂ.ಬಿ. ನಂದೀಶ್, ಎಂ. ಶಂಕರಪ್ಪ, ಎಂ. ರಾಜೇಂದ್ರ.
ರಾಜ್ಯ ಪ್ರಧಾನ ಕಾರ್ಯದರ್ಶಿಗಳು: ಎನ್. ರವಿಕುಮಾರ್, ಸಿದ್ದರಾಜು, ಅಶ್ವತ್ಥ ನಾರಾಯಣ, ಮಹೇಶ್ ಟೆಂಗಿನಕಾಯಿ.
ರಾಜ್ಯ ಕಾರ್ಯದರ್ಶಿಗಳು: ಸತೀಶ್ ರೆಡ್ಡಿ, ತುಳಸಿ ಮುನಿರಾಜುಗೌಡ, ಎಸ್. ಕೇಶವ ಪ್ರಸಾದ್, ಜಗದೀಶ್ ಹಿರೇಮನಿ, ಸುಧಾ ಜಯರುದ್ರೇಶ್, ಭಾರತಿ ಮಗ್ದುಂ, ಹೇಮಲತಾ ನಾಯಕ್, ಉಜ್ವಲಾ ಬಡವಣ್ಣಾಚೆ, ಕೆ.ಎಸ್. ನವೀನ್, ವಿನಯ್ ಬಿದರೆ.
ರಾಜ್ಯ ಖಜಾಂಚಿ : ಸುಬ್ಬ ನರಸಿಂಹ, ಲೆಹರ್ ಸಿಂಗ್ ಸಿರೋಯಾ; ರಾಜ್ಯ ಕಾರ್ಯಾಲಯ ಕಾರ್ಯದರ್ಶಿ: ಲೋಕೇಶ್ ಅಂಬೇಕಲ್ಲು; ರಾಜ್ಯ ವಕ್ತಾರರು: ಕ್ಯಾ| ಗಣೇಶ್ ಕಾರ್ಣಿಕ್; ಪ್ರಕೋಷ್ಠಗಳ ಸಂಯೋಜಕರು: ಎಂ.ಬಿ. ಭಾನುಪ್ರಕಾಶ್, ಡಾ| ಎ.ಎಚ್. ಶಿವಯೋಗಿಸ್ವಾಮಿ
ಮೋರ್ಚಾ ಅಧ್ಯಕ್ಷರು
ಯುವ ಮೋರ್ಚಾ : ಡಾ| ಸಂದೀಪ್
ಮಹಿಳಾ ಮೋರ್ಚಾ : ಗೀತಾ ವಿವೇಕಾನಂದ
ರೈತ ಮೋರ್ಚಾ : ಈರಣ್ಣ ಕಡಾಡಿ
ಹಿಂದುಳಿದ ವರ್ಗಗಳ ಮೋರ್ಚಾ : ಅಶೋಕ್ ಗಸ್ತಿ
ಎಸ್.ಸಿ. ಮೋರ್ಚಾ : ಚಲವಾದಿ ನಾರಾಯಣಸ್ವಾಮಿ
ಎಸ್.ಟಿ. ಮೋರ್ಚಾ : ತಿಪ್ಪರಾಜು ಹವಾಲ್ದಾರ್
ಅಲ್ಪಸಂಖ್ಯಾಕರ ಮೋರ್ಚಾ : ಮುಜಾಂಮಿಲ್ ಬಾಬು.