ಬೆಂಗಳೂರು: ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ನಹಿಂ ಮತ್ತು ಫಿರ್ದೋಸ್ ಬಂಧಿತರು.
ಈ ಇಬ್ಬರು ಆರೋಪಿಗಳು ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಮನೆಗೆ ಬೆಂಕಿ ಹಾಕಿ, ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿದ್ದರು. ಸಿಸಿಬಿ ಪೊಲೀಸರು ಬಂಧಿತರ ವಿಚಾರಣೆ ನಡೆಸಲಿದ್ದಾರೆ. ಇದುವರೆಗೆ 395 ಆರೋಪಿಗಳನ್ನು ಬಂಧಿಸಿದಂತಾಗಿದೆ.