Monday, February 3, 2025

ಚೆನ್ನೈ ವಿರುದ್ಧ ಹಸಿರು ಜೆರ್ಸಿಯಲ್ಲಿ ಆರ್​ ಸಿ ಬಿ ಕಣಕ್ಕೆ..! ಕಾರಣ ಏನ್ ಗೊತ್ತಾ?

 

ದುಬೈ :  13 ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಳೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣೆಸಲಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ ಸಿ ಬಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಿದೆ.

ಹೌದು ಗೋ  ಗ್ರೀನ್​​ ಉಪಕ್ರಮದ ಒಂದು ಭಾಗವಾಗಿ ಹಸಿರು ಜರ್ಸಿಯಲ್ಲಿ ವಿರಾಟ್ ಕೊಹ್ಲಿ ಪಡೆ ಆಡಲಿದೆ.  ಭೂಮಿಯನ್ನು ಹಸಿರಾಗಿಟ್ಟುಕೊಳ್ಳುವಂತೆ ಜಾಗೃತಿ ಮೂಡಿಸಲು ಆರ್ ಸಿಬಿ  ಆಟಗಾರರು ಹಾಗೂ ಸಹಾಯಕ ಸಿಬ್ಬಂದಿ ಹಸಿರು ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

25 ರಂದು ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ಹಸಿರು ಜೆರ್ಸಿಯೊಂದಿಗೆ ಆಡಲಿದ್ದೇವೆ ಎಂದು ಎ ಬಿ ಡಿವಿಲಿಯರ್ಸ್​​ ಹೇಳಿರುವ ವಿಡಿಯೋವನ್ನು ಆರ್ ಸಿಬಿ ತನ್ನ ಅಧಿಕೃತ ಟ್ವಿಟ್ಟರ್​ನಲ್ಲಿ ಪೋಸ್ಟ್ ಮಾಡಿದೆ.  ಗೋ ಗ್ರೀನ್​ ಉಪಕ್ರಮವನ್ನು ಬೆಂಬಲಿಸಬೇಕೆಂದು ಆರ್ ಸಿಬಿ ಆಟಗಾರರು ಕೋರಿದ್ದಾರೆ.

RELATED ARTICLES

Related Articles

TRENDING ARTICLES