Monday, February 24, 2025

ಖಾತೆ ಹಂಚಿಕೆಯಲ್ಲಿ ಯಾವುದೇ ಅಸಮಾಧಾನ ಇಲ್ಲ: ಉಮೇಶ್ ಕತ್ತಿ

ಬೆಂಗಳೂರು: ನೂತನ ಖಾತೆ ಹಂಚಿಕೆಯಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ವಿಧಾನಸೌಧದಲ್ಲಿ ಆಹಾರ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ನಾನು ಈ ಹಿಂದೆ 13 ವರ್ಷ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ರಾಜ್ಯದ ಮಂತ್ರಿಯಾಗಿರುವುದಕ್ಕೆ ಸಂತೋಷವಾಗಿದ್ದೇನೆ. ಬಿಪಿಎಲ್ ಕಾರ್ಡುದಾರರಿಗೆ ಅನುಕೂಲ ಮಾಡುತ್ತೇನೆ. ಪಡಿತರ ಚೀಟಿದಾರರಿಗೆ ಜೋಳ, ರಾಗಿ ದೊರೆಯುವಂತೆ ಮಾಡುತ್ತೇನೆ. ಮಂತ್ರಿ ಸ್ಥಾನ ನನಗೆ ಹೊಸದೇನು ಅಲ್ಲ. ಖಾತೆ ವಿಚಾರದಲ್ಲಿ ಯಾವುದೇ ಅಸಮಾಧಾನ ಇಲ್ಲ. ಅಸಮಾಧಾನ ಇದ್ದಿದ್ದರೆ ಅವರನೇ ಕೇಳಿ ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

RELATED ARTICLES

Related Articles

TRENDING ARTICLES