Monday, May 20, 2024

ನಾನು ಬಿಜೆಪಿ ಟಿಕೆಟ್​ ಆಕಾಂಕ್ಷಿ – ಬಾಲಚಂದ್ರಗೌಡ ಪಾಟೀಲ್​

ಹಾವೇರಿ: ನಾನು ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದೇನೆ ಎಂದು ಬ್ಯಾಡಗಿ ಮಾಜಿ ಶಾಸಕ ಸುರೇಶಗೌಡ ಪಾಟೀಲ ಪುತ್ರ ಬಾಲಚಂದ್ರಗೌಡ ಪಾಟೀಲ ಅವರು ಹೇಳಿದ್ದಾರೆ.

ವಿಧಾನ ಪರಿಷತ್​ ಚುನಾವಣೆ ಹಿನ್ನೆಲೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದಲ್ಲಿಂದು ತಮ್ಮ ಬೆಂಬಲಿಗರೊಟ್ಟಿಗೆ ಸಭೆ ನಡೆಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಯ ಪರಿಷತ್ ಚುನಾವಣೆ ವೇಳೆ ಟಿಕೆಟ್ ಕೇಳಿದ್ದೆ.ಯುವಕರಿಗೆ ಪ್ರಾತಿನಿದ್ಯ ಕೊಟ್ಟು ನನಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೆ. ಪಕ್ಷದ ಹಿರಿಯರು ಮುಂದಿನ ಬಾರಿ ನೋಡೋಣ ಅಂದಿದ್ದರು. ನಾವು ಪಕ್ಷದ ತೀರ್ಮಾನಕ್ಕೆ ಬದ್ಧರಿದ್ದೇವೆ ಎಂದರು.

ಈ ಸಂಬಂಧ ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರ ಗಮನಕ್ಕೆ ತಂದಿದ್ದೇವೆ. ನಾಳೆಯಿಂದ ಪಕ್ಷದ ಹಿರಿಯರನ್ನ ಭೇಟಿಯಾಗುತ್ತೇವೆ. ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಬಹಳ ಜನರಿದ್ದಾರೆ. ನಾನು ಪ್ರಬಲ ಟಿಕೆಟ್ ಆಕಾಂಕ್ಷಿ ಆಗಿದ್ದೇನೆ ಎಂದು ಅವರು ಹೇಳಿದ್ದಾರೆ.

RELATED ARTICLES

Related Articles

TRENDING ARTICLES