Sunday, May 19, 2024

ಎಲ್ಲಾ ರೌಡಿಗಳು ವಿಶ್ವನಾಥ್ ಜೊತೆ ಇದ್ದಾರೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಸಂಚು ರೂಪಿಸಿದ್ದಾರೆ ಎನ್ನಲಾದ ಬಹಿರಂಗ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ತಪ್ಪು ಯಾರು ಮಾಡಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ವಿಚಾರಕ್ಕೆ ಸಂಬಂಧಿಸಿದಂತೆ ಇದೆಲ್ಲ ರಾಜಕೀಯದಲ್ಲಿ ಇದ್ದಿದ್ದೆ. ಎಲ್ಲಾ ರೌಡಿಗಳು ವಿಶ್ವನಾಥ್ ಜೊತೆ ಇದ್ದಾರೆ. ಅವರ ಲಿಸ್ಟ್ ಬೇಕಾದರೂ ಕೊಡುತ್ತೇನೆ.

ಈ ವಿಚಾರವಾಗಿ ಗೋಪಾಲಕೃಷ್ಣ ಜೊತೆಯೂ ನಾನು ಮಾತನಾಡಿದ್ದೇನೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ. ಇನ್ನು ಇದರಲ್ಲಿ ಯಾರೇ ತಪ್ಪು ಮಾಡಿದರೂ ಅವರ ವಿರುದ್ಧ ಕ್ರಮ ಜರುಗಿಸಲಿ ಎಂದ ಡಿ.ಕೆ.ಶಿ, ನಾನು ವಿಡಿಯೋ ನೋಡಿಲ್ಲ, ವಿಡಿಯೋ ನೋಡಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES