Monday, May 20, 2024

ಕಾಂಗ್ರೆಸ್ ಪಾದಯಾತ್ರೆಗೆ ಬಿಜೆಪಿ ಸಂಸದ ಬೆಂಬಲ!

ಬೆಂಗಳೂರು: ಮೇಕೆದಾಟು ಯೋಜನೆಗೆ ಪಕ್ಷಾತೀತವಾಗಿ ಹೋರಾಟ ಆಗಬೇಕು. ಕಾಂಗ್ರೆಸ್ ಪಾದಯಾತ್ರೆಗೆ ನನ್ನ ಬೆಂಬಲ ಇದೆ ಸಂಸದರೊಬ್ಬರು ಹೇಳಿದ್ದಾರೆ. ಇದನ್ನು ಕಾಂಗ್ರೆಸ್ ಸಂಸದರು ಹೇಳಿದ್ದರೆ ಅದೊಂದು ಮಾಮೂಲಿ ಸುದ್ದಿಯೆಂದು ಸುಮ್ಮನಾಗಬಹುದಿತ್ತು. ಆದರೆ ಇದನ್ನು ಹೇಳಿದ್ದು ಬಿಜೆಪಿ ಸಂಸದ ಎನ್ನುವುದೇ ಈ ಸ್ಟೋರಿಯಲ್ಲಿರುವ ಟ್ವಿಸ್ಟ್!

ಈ ಹೇಳಿಕೆಯನ್ನು ಬಿಜೆಪಿ ಸಂಸದ ಬಿ.ಎನ್ ಬಚ್ಚೇಗೌಡ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್ ಬಚ್ಚೇಗೌಡ, ಕಾಂಗ್ರೆಸ್ ಪಾದಯಾತ್ರೆಗೆ ನೇರ ಬೆಂಬಲ ನೀಡೋದಾಗಿ ಘೋಷಿಸಿದ್ದಾರೆ.

RELATED ARTICLES

Related Articles

TRENDING ARTICLES